ಬ್ರೇಕಿಂಗ್ ನ್ಯೂಸ್
24-02-22 07:17 pm HK Desk news ಕರ್ನಾಟಕ
ಹಾಸನ, ಫೆ 24 : ಮೀಟರ್ ಬಡ್ಡಿ ದಂಧೆಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೇಮಾವತಿ ನಗರದಲ್ಲಿ ನಡೆದಿದೆ.
ಸತ್ಯಪ್ರಸಾದ್ (54), ಅನ್ನಪೂರ್ಣ (50), ಗೌರವ್ (21) ಸಾವಿಗೀಡಾದ ಒಂದೇ ಕುಟುಂಬದ ಸದಸ್ಯರು. ಪತಿ - ಪತ್ನಿ ಹಾಗೂ ಪುತ್ರ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆದ್ರೆ, ಸ್ಥಳೀಯರ ಪ್ರಕಾರ ಕುಟುಂಬ ಇತ್ತಿಚೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಹಾಸನ ಮತ್ತು ಬೇಲೂರು ರಸ್ತೆಯ ಇಬ್ದಾಣೆ ಗ್ರಾಮದ ಸಮೀಪ ವೀರಭದ್ರೇಶ್ವರ ಪೆಟ್ರೋಲ್ ಬಂಕ್ ನೆಡೆಸುತ್ತಿದ್ದ ಈ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದ್ದರಿಂದ ಅದನ್ನು ಬೇರೆಯವರಿಗೆ ಬಿಟ್ಟುಕೊಟ್ಟಿದ್ದರು.
ಇತ್ತೀಚಿಗಷ್ಟೆ ಖಾಸಗಿ ಫೈನಾನ್ಸ್ ಮೂಲಕ ಐಷಾರಾಮಿ ಕಾರು ಸಹ ಖರೀದಿ ಮಾಡಿದ್ದರು. ಸಾಲದ ಸುಳಿಗೆ ಸಿಲುಕಿದ್ದರಿಂದ ಐಷಾರಾಮಿ ಕಾರನ್ನು ಬಡ್ಡಿದಂದೆ ಕೋರರು ಮೂರುದಿನಗಳ ಹಿಂದಷ್ಟೆ ವಶಕ್ಕೆ ಪಡೆದುಕೊಂಡು ಹೋಗಿದ್ದರು ಎನ್ನಲಾಗಿದೆ. ವಾರದ ಹಿಂದಷ್ಟೆ ಮಗನಿಗೆ ಉಪನಯನ ಕಾರ್ಯಕ್ರಮವನ್ನು ಬಹಳ ಅದ್ಧೂರಿಯಾಗಿ ಮನೆಯಲ್ಲಿಯೇ ನೆರವೇರಿಸಿದ್ದರು. ಮೈಸೂರಿನಲ್ಲಿ ಓದುತ್ತಿದ್ದ ಮಗ ನಾಳೆ ಮತ್ತೆ ಕಾಲೇಜಿಗೆ ಹೋಗಬೇಕಿತ್ತು. ಇಂದು ಮೃತರ ಅತ್ತೆ ಸೀತಾಲಕ್ಷ್ಮಿ ಸೊಸೆ ಅನ್ನಪೂರ್ಣರನ್ನು ಎಬ್ಬಿಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಸಂಬಂಧಿಕರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಫೆ.22ರಂದು ಮೀಟರ್ ಬಡ್ಡಿ ದಂಧೆಕೋರರು ಮನೆಗೆ ಬಂದು ಗಲಾಟೆ ನಡೆಸಿದ್ದು, ಮನನೊಂದ ಕುಟುಂಬ ಮರ್ಯಾದೆಗೆ ಅಂಜಿ ನೆನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
A businessman, his wife and their son were found dead at their residence in Hemavathi Nagar in Hassan on February 24. The deceased have been identified as Satya Prasad, 47, his wife Annapurna and their son Gaurav. Satya Prasad owns a fuel station on Belur Road on the outskirts of Hassan.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm