ಬ್ರೇಕಿಂಗ್ ನ್ಯೂಸ್
02-03-22 10:55 pm HK Desk news ಕರ್ನಾಟಕ
ಹಾವೇರಿ, ಮಾ.2: ನಮ್ಮ ಕರ್ನಾಟಕದಲ್ಲಿ ಮೆಡಿಕಲ್ ಇಂಜಿನಿಯರಿಂಗ್ ಕಾಲೇಜು ಹೆಸರಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಶಿಕ್ಷಣಕ್ಕಾಗಿ ಮೆಡಿಕಲ್ ಕಾಲೇಜು ತೆಗೆದಿಲ್ಲ, ಲೂಟಿ ಮಾಡಲು ತೆಗೆದಿದ್ದಾರೆ. ಇಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡಲು ಸೌಲತ್ತು ಇಲ್ಲ. ಇದ್ದರೂ ಕೋಟಿಗಟ್ಟಲೆ ಹಣ ಬೇಕು. ಮೆಡಿಕಲ್ ಕಾಲೇಜು ನಡೆಸುತ್ತಿರುವವರೇ ಇಂದು ನವೀನ್ ಜೀವ ತೆಗೆದಿದ್ದಾರೆ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹರಿಹಾಯ್ದಿದ್ದಾರೆ.
ಯುಕ್ರೇನಲ್ಲಿ ರಷ್ಯಾ ಬಾಂಬ್ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಮೆಡಿಕಲ್ ವಿದ್ಯಾರ್ಥಿ ನವೀನ್ ಮನೆಗೆ ಭೇಟಿಯಿತ್ತು ಮನೆಯವರಿಗೆ ಸಾಂತ್ವನ ಹೇಳಿ ಸರಕಾರ, ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವೀನ್ ಸ್ವರ್ಗಸ್ಥನಾಗಿದ್ದಾನೆ, ಈ ಘಟನೆ ನಡೆಯಬಾರದಾಗಿತ್ತು. ಯಾರದೋ ದೇಶದ ಯುದ್ದದಲ್ಲಿ ನಮ್ಮವರು ಬಲಿಯಾಗುವಂತದ್ದು ದುರಂತ. ತಮ್ಮ ದೇಶಕ್ಕೆ ಬಂದವರನ್ನು ಕಾಪಾಡುವುದು ಅವರ ಕರ್ತವ್ಯ. ಬೇರೆ ದೇಶಕ್ಕೆ ಹೋದವರನ್ನು ಕರೆ ತರುವುದು ನಮ್ಮ ಕರ್ತವ್ಯ. ರಾಜ್ಯದ ಕೇಂದ್ರ ಮಂತ್ರಿಗಳು ಮತ್ತು ಇದೇ ಜಿಲ್ಲೆಯ ಸಿಎಂಗೆ ಈ ಬಗ್ಗೆ ಆಗ್ರಹ ಮಾಡುತ್ತೇನೆ. ಉಕ್ರೇನಲ್ಲಿರುವ ಮಕ್ಕಳನ್ನು ಜೊತೆಗೆ ಅಲ್ಲಿರುವ ಜನರನ್ನು ಕರೆತರವುದು ವೇಗವಾಗಿ ಆಗಬೇಕು. ಇದಕ್ಕಾಗಿ ಏನು ಮಾಡಬೇಕೋ ಅದನ್ನು ಮಾಡಿ ಎಂದು ಆಗ್ರಹಿಸಿದರು.
ಎಂಬಿಬಿಎಸ್ ಕಲಿತ ರ್ಯಾಂಕ್ ಸ್ಟೂಡೆಂಟನ್ನು ಕಳೆದುಕೊಂಡಿದ್ದು ನಮ್ಮ ಸಮಾಜದ ದುರಂತ. ಇನ್ನು ಒಂದೇ ವರ್ಷದಲ್ಲಿ ವೈದ್ಯನಾಗಬೇಕಾದವನು ಇಲ್ಲ ಎಂದರೆ ಕುಟುಂಬಕ್ಕೆ ನೋವು ಆಗುತ್ತೆ. ಆದರೆ ನವೀನ್ ಮೃತದೇಹವನ್ನಾದ್ರು ಕೇಂದ್ರ ಸರಕಾರ ತಂದು ಕೊಡಬೇಕು. ಅವರ ಸಹೋದರ ಹರ್ಷನಿಗೆ ಸರ್ಕಾರಿ ನೌಕರಿ ಕೋಡಬೇಕು. ಇಲ್ಲವಾದಲ್ಲಿ ಶ್ರೀರಾಮ್ ಸೇನೆ ಉಗ್ರ ಹೋರಾಟಕ್ಕೆ ಮುಂದಾಗುತ್ತದೆ ಎಂದು ಎಚ್ಚರಿಸಿದರು.
Pramod Muthalik slams medical college, says college responsible for the death of Naveen in Ukraine
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm