ಬ್ರೇಕಿಂಗ್ ನ್ಯೂಸ್
03-03-22 03:18 pm HK Desk news ಕರ್ನಾಟಕ
ಬಾಗಲಕೋಟ, ಮಾ.3: ಉಕ್ರೇನಿನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಅಲ್ಲಿಂದ ಬಿಟ್ಟು ಬರಲೇಬೇಕು ಎಂದು ಭಾರತದ ರಾಯಭಾರ ಕಚೇರಿ ಸೂಚನೆ ನೀಡುತ್ತಲೇ ಬಂಕರಿನಡಿ ಅಡಗಿಕೊಂಡಿದ್ದ ವಿದ್ಯಾರ್ಥಿಗಳು ಅಪಾಯ ಲೆಕ್ಕಿಸದೆ ನಡೆದುಕೊಂಡೇ ಬರುತ್ತಿದ್ದಾರೆ. ಆದರೆ, ಖಾರ್ಕೀವ್ ನಗರದ ಆಸುಪಾಸಿನ ನಿಗದಿತ ಪ್ರದೇಶಗಳಿಗೆ ಬರಲು ಸೂಚನೆ ನೀಡಿದ್ದರೂ, ಉಕ್ರೇನ್ ಮಿಲಿಟರಿಯೇ ತಡೆಯುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಆತಂಕ ತೋಡಿಕೊಂಡಿದ್ದಾರೆ.
ಬುಧವಾರ ಖಾರ್ಕಿವ್ ನಗರದಿಂದ ಭಾರತದ 800 ಕ್ಕೂ ಹೆಚ್ಚು ವಿದ್ಯಾರ್ಥಿಗಳು 20 ಕಿಮೀ ದೂರಕ್ಕೆ ನಡೆಯುತ್ತಾ ಬಂದಿದ್ದಾರೆ. ಬಾಗಲಕೋಟೆಯ ಕಿರಣ ಸವದಿ ಸೇರಿದಂತೆ ಹಲವಾರು ಕನ್ನಡಿಗರು ಹಾಗೂ ಭಾರತೀಯ ಒಟ್ಟು 800 ರಷ್ಟು ವಿದ್ಯಾರ್ಥಿಗಳು ಇದ್ದರು.

ಆದರೆ ಖಾರ್ಕಿವ್ ರೇಲ್ವೆ ನಿಲ್ದಾಣದಲ್ಲಿ ಟ್ರೇನ್ ಹತ್ತಲು ಅಲ್ಲಿನ ಮಿಲಿಟರಿ ಅವಕಾಶ ನೀಡಿರಲಿಲ್ಲ. ಮೊದಲ ಆದ್ಯತೆ ಉಕ್ರೇನ್ ದೇಶದವರಿಗೇ ನೀಡಲಾಗಿತ್ತು. ಅಲ್ಲಿನ ಜನರೇ ಖಾರ್ಕೀವ್ ನಗರ ಬಿಟ್ಟು ಹೊರ ಪ್ರದೇಶಗಳಿಗೆ ತೆರಳುತ್ತಿದ್ದಾರೆ. ಉಕ್ರೇನ್ ಪ್ರಜೆಗಳು ಟ್ರೇನ್ ಹತ್ತಿದ ಬಳಿಕ ಜಾಗ ಇದ್ದರೆ ಭಾರತದ ವಿದ್ಯಾರ್ಥಿನಿಯರಿಗೆ ಕೊಡಲಾಗಿತ್ತು. ಆನಂತರ ಸ್ಥಳಾವಕಾಶ ಇದ್ದರೆ ಮಾತ್ರ ಇತರ ವಿದ್ಯಾರ್ಥಿಗಳಿಗೆ ಅವಕಾಶ ಕೊಟ್ಟಿದ್ದರು. ಹೆಚ್ಚು ಜನರು ಟ್ರೇನ್ ಹತ್ತೋದಕ್ಕೆ ಮುಂದಾದರೆ ಉಕ್ರೇನ್ ಯೋಧರು ಗಾಳಿಯಲ್ಲಿ ಗುಂಡು ಹಾರಿಸಿ ಹೆದರಿಸುತ್ತಿದ್ದರು ಎಂದು ಕಿರಣ ಸವದಿ ಅಲ್ಲಿನ ಸ್ಥಿತಿಯನ್ನು ವಿವರಿಸಿದ್ದಾರೆ.

ಸಂಜೆ ಹೊತ್ತಿಗೆ ಖಾರ್ಕಿವ್ ಬಿಡಲೇಬೇಕು. ಇಲ್ಲದಿದ್ದರೆ ಅಪಾಯ ಎಂದು ಎಂಬಸಿಯಿಂದ ಸೂಚನೆ ನೀಡಲಾಗಿತ್ತು. ಆದ್ದರಿಂದ 800 ಜನರು ಖಾರ್ಕೀವ್ ನಿಂದ 20 ಕಿಮೀ ದೂರದ ಪೆಸೊಚಿನ್ ಪ್ರದೇಶಕ್ಕೆ ನಡೆದುಕೊಂಡು ಬಂದಿದ್ದೇವೆ. ಅದಕ್ಕೂ ಮೊದಲು ಹಾಸ್ಟೆಲ್ ಬಂಕರ್ ನಿಂದ ಖಾರ್ಕಿವ್ ರೇಲ್ವೆ ನಿಲ್ದಾಣಕ್ಕೆ 12 ಕಿಮೀ ನಡೆದುಕೊಂಡು ಬಂದಿದ್ದೆವು. ಬಹಳ ಭಯ ಆಗುತ್ತಿತ್ತು. ನಡೆದುಕೊಂಡು ಬರುವ ವೇಳೆ ಬದುಕುತ್ತೇವೋ ಇಲ್ಲವೋ ಎನಿಸಿತ್ತು. ಹೊಟ್ಟೆ ಹಸಿವು, ನೀರಡಿಕೆ ಮಧ್ಯೆ ನಡೆದು ಬಂದಿದ್ದೇವೆ. ಎಷ್ಟೋ ಜನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ದಾರಿಯುದ್ದಕ್ಕೂ ಅಳುತ್ತಾ ಬಂದಿದ್ದಾರೆ. ಬಹುತೇಕ ಎಲ್ಲರೂ ಜೀವ ಕೈಯಲ್ಲಿ ಹಿಡಿದುಕೊಂಡು ಅಳುತ್ತಾ ಬಂದಿದ್ದೇವೆ. ಖಾರ್ಕಿವ್ ನಲ್ಲಿ ನರಕ ಅನುಭವಿಸಿದ್ದೇವೆ.

ಖಾರ್ಕಿವ್ ರೇಲ್ವೆ ನಿಲ್ದಾಣದಿಂದ ಪೆಸೊಚಿನ್ ಗೆ ಬರುವಾಗ ಉಕ್ರೇನ್ ಯೋಧರು ಸಹಾಯ ಮಾಡಿದರು. ಎಲ್ಲರಿಗೂ ಬೇಗ ಹೋಗಿ ಎಂದು ಮಾರ್ಗ ತೋರಿಸಿ ಸಹಕರಿಸಿದರು. ಸದ್ಯ ಪೆಸೊಚಿನ್ ನಗರದ ಒಂದು ಹೊಟೆಲ್ ನಲ್ಲಿ ಇದ್ದೇವೆ. ಎಂಬಸಿ ಅಧಿಕಾರಿಗಳ ಸೂಚನೆ ಮೇರೆಗೆ ಇದೇವೆ. ಇಲ್ಲಿ ಯಾವುದೇ ಅಪಾಯವಿಲ್ಲ ಸೇಫ್ ಜಾಗ ಇದೆ. ಇವಾಗ ಸ್ವಲ್ಪ ನೆಮ್ಮದಿ ಸಿಕ್ಕಿದೆ.. ಊಟದ ವ್ಯವಸ್ಥೆ ಮಾಡೋದಾಗಿ ಹೇಳಿದಾರೆ. ಸದ್ಯಕ್ಕೆ ಬ್ರೆಡ್ ಸ್ನ್ಯಾಕ್ಸ್ ತಿನ್ನುತ್ತೇವೆ. ಇವಾಗ ಸ್ವಲ್ಪ ನೆಮ್ಮದಿ, ನಿದ್ದೆ ಮಾಡುತ್ತೇವೆ. ಇಲ್ಲಿಂದ ರಷ್ಟಾ ಗಡಿ ಕೇವಲ 7-8 ಕಿಮೀ ಮಾತ್ರ. ನಮ್ಮನ್ನು ಆದಷ್ಟು ಬೇಗ ಸ್ಥಳಾಂತರ ಮಾಡಬೇಕೆಂದು ಮನವಿ ಮಾಡಿಕೊಳ್ತೀವಿ. ಇಲ್ಲದಿದ್ದರೆ ಇಲ್ಲಿಯೂ ದಾಳಿ ಆಗಬಹುದು ಎಂದು ಕಿರಣ ಸವದಿ ಆತಂಕ ಹೇಳಿಕೊಂಡಿದ್ದಾರೆ. ಕಿರಣ ಸವದಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಾವಲಗಿ ಗ್ರಾಮದ ನಿವಾಸಿಯಾಗಿದ್ದು ಮೆಡಿಕಲ್ ವ್ಯಾಸಂಗಕ್ಕಾಗಿ ಉಕ್ರೇನ್ ತೆರಳಿದ್ದರು.
Karnataka students walk for almost 32 Kms in Ukraine, no food no water, cry for help.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm