ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm