ಬ್ರೇಕಿಂಗ್ ನ್ಯೂಸ್
07-03-22 05:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.7: ತಮಿಳುನಾಡಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿರುವ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿರುವ ಪ್ರಕರಣ ಈಗ ಬೆಂಗಳೂರು ತಲುಪಿದೆ. ಯುವತಿ ಹಾಗೂ ಆಕೆಯ ಪ್ರಿಯಕರ ಸತೀಶ್ ಕುಮಾರ್ ಕನ್ನಡ ಸಂಘಟನೆಗಳ ಆಶ್ರಯ ಪಡೆದು ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಕಾಣಿಸಿಕೊಂಡಿದ್ದಾರೆ.
ಸಚಿವರ ಮಗಳನ್ನು ಯುವಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಆನಂತರ ಕನ್ನಡ ಸಂಘಟನೆಗಳ ನಾಯಕರ ಆಶ್ರಯ ಪಡೆದು ಬೆಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಜೀವ ಬೆದರಿಕೆ ಇದ್ದು ರಕ್ಷಣೆ ಕೊಡಿ ಎಂದು ಬೇಡಿಕೆ ಇಟ್ಟು ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಯುವತಿ, ನಮಗೆ ತಮಿಳುನಾಡು ಪೊಲೀಸ್ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಕರ್ನಾಟಕಕ್ಕೆ ಬಂದಿದ್ದೇವೆ. ಅಲ್ಲಿಗೆ ಹೋದ್ರೆ ನಮ್ಮನ್ನು ಕೊಲೆ ಮಾಡ್ತಾರೆ. ಯೂ ಟ್ಯೂಬ್ ನಲ್ಲಿ ಕನ್ನಡ ಸಂಘಟನೆ ಸರ್ಚ್ ಮಾಡಿದ್ದೆ. ಆಗ ಭರತ್ ಶೆಟ್ಟಿ, ಮಧುಗಿರಿ ಮೋದಿ ಅಂತ ತೋರಿಸ್ತು. ಹಾಗೆ ಅವರನ್ನ ಸಂಪರ್ಕ ಮಾಡಿ ಬಂದಿದ್ದೇನೆ ಎಂದು ಹೇಳಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಅವರ ರೈಟ್ ಹ್ಯಾಂಡ್ ಆಗಿದ್ದಾರೆ ನನ್ನ ತಂದೆ. ತಂದೆ ಶೇಖರ್ ಬಾಬು ಹೇಳಿದ ಹಾಗೆ ಪೊಲೀಸರು ಕೇಳ್ತಾರೆ. ಈಗಾಗಲೇ ಸತೀಶ್ ಕುಮಾರ್ ಮನೆಯವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿ ಕಮಿಷನರ್ ಸಂಜೆ ಬರಲು ಹೇಳಿದ್ದಾರೆ. ನಾನು ಎಂಬಿಬಿಎಸ್ ಮಾಡಿದೀನಿ, ಸತೀಶ್ ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡ್ತಿದಾನೆ. ನಮ್ಮನ್ನು ಬದುಕಲು ಬಿಡಿ ಎಂದು ಯುವತಿ ಅಂಗಲಾಚಿದ್ದಾಳೆ.
Tamil Nadu Minister Sekar Babu daughter seeks help of Karnataka police after she gets married to her lover. She flee with her lover to Bangalore and has seeked help of Kannada Pro Organisations.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm