ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm