ಬ್ರೇಕಿಂಗ್ ನ್ಯೂಸ್
15-03-22 11:44 am Bengalore Correspondent ಕರ್ನಾಟಕ
ಬೆಂಗಳೂರು, ಮಾ.15: ರಾಷ್ಟ್ರಮಟ್ಟದಲ್ಲಿ ತೀವ್ರ ವಿವಾದ ಎಬ್ಬಿಸಿದ್ದ ಹಿಜಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು ಹಿಜಬ್ ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.
ಉಡುಪಿ ಸರಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಬಳಿಕ ಇಡೀ ರಾಜ್ಯಕ್ಕೆ ಹಬ್ಬಿತ್ತು. ವಿವಾದ ನ್ಯಾಯಾಲಯದ ಮೆಟ್ಟಿಲೇರಿದ ಸತತ 13 ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಪೀಠ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಆಧರಿತ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ತೀರ್ಪು ನೀಡಿದೆ. ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಕುರಾನ್ ನಲ್ಲಿ ಹಿಜಾಬ್ ಅವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಯಾವುದೇ ಆಧಾರವಿಲ್ಲ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ವಿಧ್ಯಾರ್ಥಿನಿಯರು ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡಲು ಅವಕಾಶ ಇಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.
In an important verdict on Tuesday, the Karnataka High Court dismissed various petitions challenging a ban on Hijab in education institutions. The full bench of the HC concluded its hearing in the Hijab case saying that wearing the Hijab is not a part of essential religious practices in Islam.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm