ಬ್ರೇಕಿಂಗ್ ನ್ಯೂಸ್
27-03-22 01:16 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.27: ಹೈಕೋರ್ಟ್ ತೀರ್ಪು ಹೊರತಾಗಿಯೂ ಕಾಲೇಜು ಶಿಕ್ಷಣದಿಂದ ದೂರ ಉಳಿದಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಶಿಕ್ಷಣ ಮತ್ತು ನಿಮ್ಮ ಭವಿಷ್ಯ ಮುಖ್ಯ. ಹಾಗಾಗಿ ಹಿಜಾಬ್ ವಿಚಾರದಲ್ಲಿ ನಿಮ್ಮ ಶಿಕ್ಷಣಕ್ಕೆ ಕುಂದು ತರುವ ಕೆಲಸ ಮಾಡಬೇಡಿ ಎಂದು ಸಲಹೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಎಂದು ರಾಜ್ಯ ಸರಕಾರ ಸುತ್ತೋಲೆ ಬಿಡುಗಡೆ ಮಾಡಿದ್ದರಿಂದ ಡಿಕೆಶಿ ಈ ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಡಿಕೆಶಿ, ಶಾಲಾ ಶಿಕ್ಷಕರು ಕೂಡ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಕೂರಿಸಿ ಮನವೊಲಿಕೆ ಮಾಡಬೇಕು. ಹೈಕೋರ್ಟ್ ತೀರ್ಪು ನೀಡಿದರೂ, ಕೆಲವು ವಿದ್ಯಾರ್ಥಿನಿಯರು, ಪೋಷಕರು ತೀರ್ಪಿನ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಸದ್ಯಕ್ಕೆ ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದ್ದು, ಮುಂದೆ ಬೇರೆ ರೀತಿಯ ತೀರ್ಪು ಬರುವುದಕ್ಕೂ ಅವಕಾಶ ಇರುತ್ತದೆ. ಯಾವುದಕ್ಕೂ ಕಾಯಬೇಕಾಗುತ್ತದೆ. ಹಾಗೆಂದು ಹಿಜಾಬ್ ವಿಚಾರದಲ್ಲಿ ಒಂದೇ ವಿಚಾರಕ್ಕೆ ಅಂಟಿಕೊಂಡು ಕುಳಿತರೆ ತಮ್ಮ ಭವಿಷ್ಯವೇ ಹಾಳಾಗುತ್ತದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಮವಸ್ತ್ರದ ಬಣ್ಣದ ಶಾಲನ್ನೇ ತಲೆಗೆ ಹಾಕಿಕೊಂಡು ಬರಲಿ ಎಂಬ ಹೇಳಿಕೆಯ ಬಗ್ಗೆ ಕೇಳಿದ್ದಕ್ಕೆ, ಸಂವಿಧಾನ ಏನು ಹೇಳುತ್ತದೋ ಅದು ಎಲ್ಲರಿಗೂ ಅನ್ವಯ ಎಂದು ಹೇಳಿದರು. ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಭವಿಷ್ಯ ಹಾಳು ಮಾಡುವುದಕ್ಕಿಂತ ಕುಳಿತು ಸಮಸ್ಯೆ ಬಗೆಹರಿಸುವುದು ಒಳ್ಳೆಯದು. ಇದಕ್ಕಾಗಿ ಸರಕಾರ ನಡೆಸುವ ಮಂದಿ ವಿದ್ಯಾರ್ಥಿನಿಯರ ಮನವೊಲಿಸುವ ಕೆಲಸ ಮಾಡಬೇಕು. ಅಧಿಕಾರಿಗಳು, ಪೋಷಕರು, ಕಾಲೇಜು ಆಡಳಿತಗಳು ಪಟ್ಟು ಹಿಡಿದು ಕುಳಿತಿರುವ ವಿದ್ಯಾರ್ಥಿಗಳನ್ನು ಮನವೊಲಿಸಬೇಕು ಎಂದು ಹೇಳಿದರು.
Karnataka Congress President D.K. Shivakumar on Saturday urged parents and the BJP government in the state to convince the students about the court verdict on hijab to ensure that their careers are not ruined.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm