ಬ್ರೇಕಿಂಗ್ ನ್ಯೂಸ್
27-03-22 08:22 pm HK Desk news ಕರ್ನಾಟಕ
ಬಾಗಲಕೋಟ, ಮಾ.27 : ಸಿದ್ದರಾಮಯ್ಯರಿಗೆ ಹಿಂದು ಧರ್ಮದ ಬಗ್ಗೆ ನಂಬಿಕೆ ಇಲ್ಲ, ನೇರ ಹಿಂದು ವಿರೋಧಿ. ಯಾಕಂದ್ರೆ ಮುಂದೆ ಮುಸಲ್ಮಾನರ ಕ್ಷೇತ್ರದಿಂದ ಗೆಲ್ಲಬೇಕು. ಈ ಬಾರಿ ಬಾದಾಮಿಗೆ ಬರಲ್ಲ. ಚಾಮುಂಡೇಶ್ವರಿ ಕ್ಷೇತ್ರವೂ ಸೋತಿದ್ದು ಅಲ್ಲಿ ಹೋಗಲ್ಲ. ಸುಮ್ನೆ ಅವರು ಕರೀತಾರೆ, ಇವ್ರು ಕರೀತಾರೆ ಎಂದು ಹೇಳಿ ನಾಟಕ ಮಾಡ್ತಾರೆ. ಇವ್ರಿಗೆ ಸ್ವಂತ ಕ್ಷೇತ್ರವೇ ಇಲ್ಲ.. ಅದಕ್ಕಾಗಿ ಉಳಿದಿದ್ದು ಒಂದು ಜಮೀರ್ ಅಹ್ಮದ್ ಕ್ಷೇತ್ರ ಚಾಮರಾಜನಗರ. ಅಲ್ಲಿ ಮುಸಲ್ಮಾನರು ಜಾಸ್ತಿ ಇದ್ದಾರೆ, ಅಲ್ಲಿ ನಿಂತ್ಕೊಂಡು ಗೆಲ್ಲಬೇಕು ಅಂತ ಒಂದೇ ಕಾರಣಕ್ಕೆ ಹಿಂದು ಸಮಾಜ ಟೀಕೆ ಮಾಡ್ತಾ ಹೊರಟಿದ್ದಾರೆ, ಇದನ್ನ ಅವರೇ ಅನುಭವಿಸ್ತಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಹಿಜಬ್ ಬಗ್ಗೆ ಕೋರ್ಟ್ ತೀರ್ಪು ಬಂದರೂ ಮುಸಲ್ಮಾನ್ ವಿದ್ಯಾರ್ಥಿಗಳು, ನಾವು ಶಿಕ್ಷಣವನ್ನೇ ಬಿಡ್ತೀವಿ ಆದ್ರೆ ಧರ್ಮ ಬಿಡಲ್ಲ ಅಂದ್ರು. ಅವರಿಗೆ ಬುದ್ದಿಮಾತಾದ್ರು ಸಿದ್ದರಾಮಯ್ಯ ಹೇಳಬೇಕಿತ್ತಲ್ಲ. ನೀವು ಹಾಗೆ ಮಾಡಬೇಡಿ, ಶಿಕ್ಷಣ ಮುಖ್ಯ ಅಂತಾ ಹೇಳಬೇಕಿತ್ತಲ್ವಾ, ಒಂದೇ ಒಂದು ಮಾತು ಹೇಳಿಲ್ಲ.. ಯಾಕೆ ಮುಸ್ಲಿಂ ಓಟು ಕಳಕೊಳ್ಳೋದು ಅಂತ ಹಾಗೆ ಹೇಳಿಲ್ಲ. ಈ ರೀತಿ ಮಾಡಿ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗ್ತಾ ಹೋಗಿದೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಜೀವ ಕುಟು...ಕುಟು ಅಂತಿದೆ. ಯಾವಾಗ ಇದು ಸಾಯುತ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ನಂತವರು ಒಬ್ಬರು ಸಾಕು ಪಕ್ಷ ನಿರ್ನಾಮ ಆಗೋದಕ್ಕೆ.

ಇವರು ಮೊದಲು ಕೋರ್ಟ್ ಗೆ ಗೌರವ ಕೊಡೋದನ್ನ ಕಲಿತುಕೊಳ್ಳಲಿ. ಸಾಧು ಸಂತರ ಬಗ್ಗೆ ನೀವು ಮಾಡಿರೋ ಹೇಳಿಕೆ, ಅಕ್ಷ್ಯಮ್ಯ ಅಪರಾಧ. ಜರಾಸಂಧನಿಗೆ ನೂರು ತಪ್ಪು ಮಾಡಿದಾಗ ಶಿಕ್ಷೆ ಆಯ್ತು ಅಂತಾರಲ್ಲ ಹಾಗೆ, ಇವರದ್ದೂ ನೂರು ತಪ್ಪಾಯ್ತು. ಶಿಕ್ಷೆ ನೀಡಲು ಜನ ಕಾದಿದ್ದಾರೆ.
ಇವರು ರಾಜಕೀಯ ನಿವೃತ್ತಿ ತಗೊಳ್ಳೋದೇ ಉತ್ತಮ. ಇಲ್ಲವೇ ಅವರನ್ನ ಕಾಂಗ್ರೆಸ್ ಪಕ್ಷದಿಂದ ಕಿತ್ತು ಬಿಸಾಕ್ಬೇಕು. ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಅಷ್ಟು ಶಕ್ತಿ ಇದ್ರೆ ಇದನ್ನು ಮಾಡಲಿ. ಇಲ್ಲಾಂದ್ರೆ, ಕನಿಷ್ಟ ನಿಮ್ಮ ಸೋನಿಯಾ ಅಥವಾ ರಾಹುಲ್ ಗಾಂಧಿಗಾದ್ರು ಹೇಳಿ ವಜಾ ಮಾಡಿಸಿ. ಇಡೀ ರಾಜ್ಯದಲ್ಲಿ ಸಿದ್ದರಾಮಯ್ಯ ಜೊತೆ ಒಬ್ಬ ಕಾಂಗ್ರೆಸ್ ನಾಯಕ ಇಲ್ಲಾಂದ್ರೆ ನೀವೇಕೆ ರಾಜಕಾರಣ ಮಾಡ್ತಿದ್ದೀರಿ ಎಂದು ಸಿದ್ದುಗೆ ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.
)
ಶಾಲಾ ಸಮವಸ್ತ್ರ ವಿಚಾರವಾಗಿ ಸ್ವಾಮೀಜಿಗಳ ಉಡುಗೆಗೆ ಕೈ ಹಾಕಿ ಸಿದ್ದರಾಮಯ್ಯ ಕೈ ಸುಟ್ಟುಕೊಂಡ್ರಾ ಎಂಬ ಪ್ರಶ್ನೆಗೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಪ, ಪಾಪ ಇದನ್ನೆಲ್ಲ ನಂಬಲ್ಲ ಸಿದ್ದರಾಮಯ್ಯ. ಗೋಮಾಂಸ ತಿಂದೇ ದೇವಸ್ಥಾನಕ್ಕೆ ಹೋಗ್ತೀನಿ ನಾನು, ನೀವೇನು ಕೇಳೋರು ಎಂದವರು ಅವ್ರು. ಈ ಮಾತನ್ನ ಹೇಳಿದವರು ದೇವರು, ಪಾಪ, ಸ್ವಾಮೀಜಿಗಳನ್ನ ನಂಬುತ್ತಾರೆಯೇ.. ಪ್ರಜಾಪ್ರಭುತ್ವ ನಂಬ್ತೇನೆ, ಸಂವಿಧಾನ ನಂಬ್ತೇನೆ ಅಂತಾ ಹೇಳಿದ ವ್ಯಕ್ತಿ, ಇಂದು ಕೋರ್ಟ್ ಹಾಗೂ ಸಂವಿಧಾನಕ್ಕೂ ನೀವು ಮೋಸ ಮಾಡಿದ್ರಿ ಅಲ್ವಾ ಎಂದು ಕುಟುಕಿದ್ದಾರೆ.
A day after senior Congress leader S Siddaramiah made remarks on the attire of Hindu pontiffs, BJP leaders launched a broadside against him.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm