ಬ್ರೇಕಿಂಗ್ ನ್ಯೂಸ್
28-03-22 08:07 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.28 : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ ಎದುರಾಗಿದೆ. ತಮ್ಮ ಪ್ರಭಾವ ಬಳಸಿಕೊಂಡು ಕಾನೂನು ಬಾಹಿರವಾಗಿ 116 ಎಕ್ರೆ ಸರ್ಕಾರಿ ಜಮೀನನ್ನು ಖಾಸಗಿ ಶಿಕ್ಷಣ ಸಂಸ್ಥೆಗೆ ಮಾರಾಟ ಮಾಡಿರುವ ಆರೋಪ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಹಾಗೂ ವಕೀಲರ ತಂಡ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇವನಹಳ್ಳಿಯ ಹರಳೂರು ಮತ್ತು ಪೂಲನಹಳ್ಳಿಯ ಕೆಐಎಡಿಬಿಗೆ ಸೇರಿದ 116 ಎಕರೆ ಜಮೀನನ್ನ ಯಾವುದೇ ಅರ್ಹತೆ ಹೊಂದಿರದ ಸಿಇಎಸ್ಎಸ್ ಎನ್ನುವ ಹೆಸರಿನ ಖಾಸಗಿ ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ ಎನ್ನಲಾಗ್ತಿದೆ. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು. ಆದರೆ ಈ ನಿಯಮವನ್ನ ಗಾಳಿಗೆ ತೂರಿ ಅಧಿಕಾರ ದುರುಪಯೋಗ ಮಾಡಿಕೊಂಡು ಖಾಸಗಿ ವಿವಿ ಸ್ಥಾಪಿಸಲು ಜಮೀನು ಮಂಜೂರು ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.

ಹಿಂದಿನ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿದ್ದರು. ಆದರೆ, 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿ ರೂಪಾಯಿಗೆ ಭೂಮಿ ಮಂಜೂರು ಮಾಡಲಾಗಿದೆ. ಸಿಎಂ ಆಗಿದ್ದ ಅವಧಿಯಲ್ಲಿ ಬಿಎಸ್ವೈ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಜಮೀನು ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಕ್ರಮವಾಗಿ ಸದರಿ ಜಮೀನನ್ನು ಮಂಜೂರು ಮಾಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ಮಾಡಿದ್ದರು ಎಂಬ ಆರೋಪ ಯಡಿಯೂರಪ್ಪ ಮೇಲಿದೆ. ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಭೂಮಿ ಮಂಜೂರಾತಿಗೆ ಆದೇಶ ಮಾಡಿದ್ದರು. ಸರಕಾರದ ಮಾರ್ಗಸೂಚಿಯಂತೆ ನಡೆದುಕೊಳ್ಳದ ಕಾರಣ ಸರಕಾರದ ಬೊಕ್ಕಸಕ್ಕೆ 136 ಕೋಟಿ ನಷ್ಟವಾಗಿತ್ತು. ಇಲ್ಲಿ ಶಿಕ್ಷಣದ ಉದ್ದೇಶ ಬದಿಗಿಟ್ಟು ರಿಯಲ್ ಎಸ್ಟೇಟ್ ವ್ಯಾಪಾರದ ಉದ್ದೇಶಕ್ಕಾಗಿ ಭೂಮಿ ಪಡೆಯಲಾಗಿದೆ ಎಂದು ದೂರುದಾರ ರಾಜಣ್ಣ ದೂರಿದ್ದಾರೆ.
Former chief minister BS Yeddyurappa is back in a quake. Former CM BS Yeddyurappa has been accused of illegally selling state land using his influence. This relationship is related to social worker K.C. Rajanna and his team of lawyers have lodged a complaint with the Corruption Prevention Squad (ACB).
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm