ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am