ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm