ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm