ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm