ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm