ಬ್ರೇಕಿಂಗ್ ನ್ಯೂಸ್
11-04-22 04:12 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.11 : ಯಾರೇ ಕಾನೂನನ್ನ ಕೈಗೆತ್ತಿಕೊಂಡ್ರೂ ಅದು ತಪ್ಪೇ. ಆದರೆ ಕಲ್ಲಂಗಡಿ ಹಣ್ಣಿನ ಬಗ್ಗೆ ಕನಿಕರ ತೋರಿಸುವವರು, ತಲೆ ಹೊಡೆದಾಗ ಯಾಕೆ ಕನಿಕರ ತೋರಿಸಲಿಲ್ಲ ಅನ್ನೋದನ್ನು ಕೇಳಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಕಲ್ಲಂಗಡಿ ವ್ಯಾಪಾರಿ ಬಗ್ಗೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರ ಹೇಳಿಕೆಯನ್ನೂ ನಾನು ಗಮನಿಸಿದ್ದೇನೆ. ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಬಿದ್ದಾಗ ಎಲ್ಲರೂ ಸುಮ್ಮನಿದ್ದರು. ಕಲ್ಲಂಗಡಿ ಹಣ್ಣಿನ ಬಗ್ಗೆ ತೋರಿಸುವ ಕಳಕಳಿ, ಸಂಕಟವನ್ನ ತಲೆ ಹೊಡೆದಾಗಲೂ ತೋರಿಸಲಿ. ತಲೆ ಹೊಡೆದಾಗ ಯಾಕೆ ಎಲ್ಲರೂ ಸುಮ್ಮನಿರುತ್ತಾರೆ. ನಾವು ಖಂಡಿಸಿದರೆ ವೋಟು ಹೋಗುತ್ತೆ ಅನ್ನೋ ಸಂಕಟನಾ?ಎಂದು ಸೀಟಿ ರವಿ ಮಾರ್ಮಿಕ ಪ್ರಶ್ನೆ ಎತ್ತಿದ್ದಾರೆ. ಆದ್ರೆ ಕಾನೂನನ್ನ ಯಾರು ಕೈಗೆತ್ತಿಕೊಳ್ಳುವುದನ್ನೂ ನಾವು ಸಮರ್ಥಿಸುವುದಿಲ್ಲ. ಅಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ.. ನಮಗಿಲ್ವಾ?
ಚಂದ್ರು ಹತ್ಯೆ ಬಗ್ಗೆ ಸಚಿವರು ಮತ್ತು ಪೊಲೀಸರ ಪ್ರತ್ಯೇಕ ಹೇಳಿಕೆ ಕುರಿತು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ರವಿ, ಚಂದ್ರು ಹತ್ಯೆ ಕುರಿತು ಆತನ ತಾಯಿ, ಪ್ರತ್ಯಕ್ಷದರ್ಶಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಹತ್ಯಾ ಮೂಲ ಬಿಟ್ಟು ಬೇರೆಲ್ಲ ವಿಚಾರಗಳು ಚರ್ಚೆಯಾಗುತ್ತಿವೆ. ಹತ್ಯೆ ಮಾಡಿದ್ದೇ ಒಂದು ಅಪರಾಧ, ಅಂತಹ ಮನಸ್ಥಿತಿ ಇವರಿಗೆ ಯಾಕೆ ಬಂತು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಸಣ್ಣ ಸಣ್ಣ ವಿಚಾರಗಳಿಗೆ ಅವರು ಯಾಕೆ ಕೆರಳುತ್ತಾರೆ. ಅಖಂಡ ಶ್ರೀನಿವಾಸ್ ಮನೆಗೆ ಯಾಕೆ ಎಲ್ಲರೂ ಸೇರಿ ಬೆಂಕಿ ಹಾಕಿದ್ದರು ? ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ, ನಮಗೆ ಇಲ್ವಾ.? ಹರ್ಷನ ಹತ್ಯೆ ಮಾಡುವ ಮನಸ್ಥಿತಿ ಯಾಕೆ ಬಂತು ? ಈ ಎಲ್ಲದರ ಬಗ್ಗೆ ಗಂಭೀರವಾಗಿ ಯೋಚನೆ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.
Chikmagalur Right wing activists vandalise Muslim traders shop CT Ravi questions why congress shows so much concern where they never showed on people who were killed.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm