ಬ್ರೇಕಿಂಗ್ ನ್ಯೂಸ್
11-04-22 04:12 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.11 : ಯಾರೇ ಕಾನೂನನ್ನ ಕೈಗೆತ್ತಿಕೊಂಡ್ರೂ ಅದು ತಪ್ಪೇ. ಆದರೆ ಕಲ್ಲಂಗಡಿ ಹಣ್ಣಿನ ಬಗ್ಗೆ ಕನಿಕರ ತೋರಿಸುವವರು, ತಲೆ ಹೊಡೆದಾಗ ಯಾಕೆ ಕನಿಕರ ತೋರಿಸಲಿಲ್ಲ ಅನ್ನೋದನ್ನು ಕೇಳಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಕಲ್ಲಂಗಡಿ ವ್ಯಾಪಾರಿ ಬಗ್ಗೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರ ಹೇಳಿಕೆಯನ್ನೂ ನಾನು ಗಮನಿಸಿದ್ದೇನೆ. ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಬಿದ್ದಾಗ ಎಲ್ಲರೂ ಸುಮ್ಮನಿದ್ದರು. ಕಲ್ಲಂಗಡಿ ಹಣ್ಣಿನ ಬಗ್ಗೆ ತೋರಿಸುವ ಕಳಕಳಿ, ಸಂಕಟವನ್ನ ತಲೆ ಹೊಡೆದಾಗಲೂ ತೋರಿಸಲಿ. ತಲೆ ಹೊಡೆದಾಗ ಯಾಕೆ ಎಲ್ಲರೂ ಸುಮ್ಮನಿರುತ್ತಾರೆ. ನಾವು ಖಂಡಿಸಿದರೆ ವೋಟು ಹೋಗುತ್ತೆ ಅನ್ನೋ ಸಂಕಟನಾ?ಎಂದು ಸೀಟಿ ರವಿ ಮಾರ್ಮಿಕ ಪ್ರಶ್ನೆ ಎತ್ತಿದ್ದಾರೆ. ಆದ್ರೆ ಕಾನೂನನ್ನ ಯಾರು ಕೈಗೆತ್ತಿಕೊಳ್ಳುವುದನ್ನೂ ನಾವು ಸಮರ್ಥಿಸುವುದಿಲ್ಲ. ಅಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ.. ನಮಗಿಲ್ವಾ?
ಚಂದ್ರು ಹತ್ಯೆ ಬಗ್ಗೆ ಸಚಿವರು ಮತ್ತು ಪೊಲೀಸರ ಪ್ರತ್ಯೇಕ ಹೇಳಿಕೆ ಕುರಿತು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ರವಿ, ಚಂದ್ರು ಹತ್ಯೆ ಕುರಿತು ಆತನ ತಾಯಿ, ಪ್ರತ್ಯಕ್ಷದರ್ಶಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಹತ್ಯಾ ಮೂಲ ಬಿಟ್ಟು ಬೇರೆಲ್ಲ ವಿಚಾರಗಳು ಚರ್ಚೆಯಾಗುತ್ತಿವೆ. ಹತ್ಯೆ ಮಾಡಿದ್ದೇ ಒಂದು ಅಪರಾಧ, ಅಂತಹ ಮನಸ್ಥಿತಿ ಇವರಿಗೆ ಯಾಕೆ ಬಂತು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಸಣ್ಣ ಸಣ್ಣ ವಿಚಾರಗಳಿಗೆ ಅವರು ಯಾಕೆ ಕೆರಳುತ್ತಾರೆ. ಅಖಂಡ ಶ್ರೀನಿವಾಸ್ ಮನೆಗೆ ಯಾಕೆ ಎಲ್ಲರೂ ಸೇರಿ ಬೆಂಕಿ ಹಾಕಿದ್ದರು ? ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ, ನಮಗೆ ಇಲ್ವಾ.? ಹರ್ಷನ ಹತ್ಯೆ ಮಾಡುವ ಮನಸ್ಥಿತಿ ಯಾಕೆ ಬಂತು ? ಈ ಎಲ್ಲದರ ಬಗ್ಗೆ ಗಂಭೀರವಾಗಿ ಯೋಚನೆ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.
Chikmagalur Right wing activists vandalise Muslim traders shop CT Ravi questions why congress shows so much concern where they never showed on people who were killed.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 03:50 pm
HK News Staffer
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm