ಬ್ರೇಕಿಂಗ್ ನ್ಯೂಸ್
24-09-20 11:51 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: 'ಕರ್ನಾಟಕದಲ್ಲಿ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ಆಂಧ್ರಪ್ರದೇಶದ ಮಾದರಿಯಲ್ಲಿ ಜಿಲ್ಲಾಮಟ್ಟದ ಮೇಲುಸ್ತುವಾರಿ ಸಮಿತಿಗಳನ್ನು ಅಸ್ತಿತ್ವಕ್ಕೆ ತರಲಾಗುವುದು' ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ವಯ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸಿದ್ಧಪಡಿಸಿರುವ ಮಸೂದೆಯನ್ನು ಸದನದಲ್ಲಿ ಮಂಡಿಸುವಂತೆ ವಿಧಾನ ಪರಿಷತ್ನಲ್ಲಿ ಬುಧವಾರ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ನಿಯಮ 330ರಡಿ ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಈ ಭರವಸೆ ನೀಡಿದರು.
ಉದ್ಯಮ ಸ್ಥಾಪನೆಗೆ ಕನ್ನಡದ ನೆಲ, ಜಲವನ್ನು ಬಳಸಿಕೊಳ್ಳುವ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಿಲ್ಲ.
ಕೆಳಹಂತದ ಕೆಲವು ಉದ್ಯೋಗಗಳನ್ನು ನೀಡಿ ವಂಚಿಸುತ್ತವೆ. ಸರ್ಕಾರದ ಸೌಲಭ್ಯ ಪಡೆದ ಉದ್ದಿಮೆಗಳಷ್ಟೇ ಅಲ್ಲ, ಸೌಲಭ್ಯ ಪಡೆಯದ ಉದ್ದಿಮೆಗಳೂ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು. ಇದಕ್ಕಾಗಿ ಆಂಧ್ರಪ್ರದೇಶ ಮಾದರಿ ಅನುಷ್ಠಾನ ಮಾಡಲಾಗುವುದು' ಎಂದರು.
ವಿಷಯ ಪ್ರಸ್ತಾಪಿಸಿದ ಹೊರಟ್ಟಿ, 'ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಲಭಿಸಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪರ ಭಾಷಿಕರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರನ್ನು ಪರಭಾಷಿಕ ಶಾಸಕರೇ ಆಳುವ ದಿನಗಳು ಬಂದರೂ ಅಚ್ಚರಿ ಇಲ್ಲ. ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸುವ ಮೂಲಕ ನ್ಯಾಯ ಒದಗಿಸಬೇಕು' ಎಂದರು.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm