ಬ್ರೇಕಿಂಗ್ ನ್ಯೂಸ್
24-09-20 11:51 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: 'ಕರ್ನಾಟಕದಲ್ಲಿ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ಆಂಧ್ರಪ್ರದೇಶದ ಮಾದರಿಯಲ್ಲಿ ಜಿಲ್ಲಾಮಟ್ಟದ ಮೇಲುಸ್ತುವಾರಿ ಸಮಿತಿಗಳನ್ನು ಅಸ್ತಿತ್ವಕ್ಕೆ ತರಲಾಗುವುದು' ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ವಯ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸಿದ್ಧಪಡಿಸಿರುವ ಮಸೂದೆಯನ್ನು ಸದನದಲ್ಲಿ ಮಂಡಿಸುವಂತೆ ವಿಧಾನ ಪರಿಷತ್ನಲ್ಲಿ ಬುಧವಾರ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ನಿಯಮ 330ರಡಿ ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಈ ಭರವಸೆ ನೀಡಿದರು.
ಉದ್ಯಮ ಸ್ಥಾಪನೆಗೆ ಕನ್ನಡದ ನೆಲ, ಜಲವನ್ನು ಬಳಸಿಕೊಳ್ಳುವ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಿಲ್ಲ.
ಕೆಳಹಂತದ ಕೆಲವು ಉದ್ಯೋಗಗಳನ್ನು ನೀಡಿ ವಂಚಿಸುತ್ತವೆ. ಸರ್ಕಾರದ ಸೌಲಭ್ಯ ಪಡೆದ ಉದ್ದಿಮೆಗಳಷ್ಟೇ ಅಲ್ಲ, ಸೌಲಭ್ಯ ಪಡೆಯದ ಉದ್ದಿಮೆಗಳೂ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು. ಇದಕ್ಕಾಗಿ ಆಂಧ್ರಪ್ರದೇಶ ಮಾದರಿ ಅನುಷ್ಠಾನ ಮಾಡಲಾಗುವುದು' ಎಂದರು.
ವಿಷಯ ಪ್ರಸ್ತಾಪಿಸಿದ ಹೊರಟ್ಟಿ, 'ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಲಭಿಸಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪರ ಭಾಷಿಕರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರನ್ನು ಪರಭಾಷಿಕ ಶಾಸಕರೇ ಆಳುವ ದಿನಗಳು ಬಂದರೂ ಅಚ್ಚರಿ ಇಲ್ಲ. ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸುವ ಮೂಲಕ ನ್ಯಾಯ ಒದಗಿಸಬೇಕು' ಎಂದರು.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm