ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm