ಬ್ರೇಕಿಂಗ್ ನ್ಯೂಸ್
24-09-20 02:33 pm Headline Karnataka News Network ಕರ್ನಾಟಕ
ಬೆಳಗಾವಿ, ಸೆಪ್ಟಂಬರ್ 23: ಕೊರೊನಾ ಸೋಂಕಿನಿಂದ ಮೃತಪಟ್ಟ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ದೆಹಲಿಯಲ್ಲೇ ನಡೆಯಲಿದೆ. ನಿಧನರಾದ ಬಳಿಕ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ದೇಹದಲ್ಲಿ ಸೋಂಕು ಇರುವುದು ದೃಢಪಟ್ಟಿದ್ದರಿಂದ ಶವ ಬಿಟ್ಟುಕೊಡಲು ಏಮ್ಸ್ ವೈದ್ಯರು ನಿರಾಕರಿಸಿದ್ದಾರೆ.
ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ದೆಹಲಿಯ ದ್ವಾರಕಾ ಸೆಕ್ಟರ್-24 ರಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು ಏಮ್ಸ್ ಆಸ್ಪತ್ರೆಯಲ್ಲೇ ಅಂತಿಮ ದರ್ಶನ ಮಾಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸುರೇಶ ಅಂಗಡಿ ಹಿರಿಯ ಪುತ್ರಿ ಡಾಕ್ಟರ್ ಶೃತಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪುತ್ರಿ, ಮೊಮ್ಮಗಳು ಹಾಗೂ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ವಿಧಿವಿಧಾನ ನೇರವೇರಿಸಲು ಲಿಂಗಾಯತ ಸ್ವಾಮೀಜಿ ಬಾಳಯ್ಯ ಕೂಡ ದೆಹಲಿಗೆ ತೆರಳಿದ್ದಾರೆ.

ಬೆಳಗಾವಿಯಲ್ಲಿ ಮಡುಗಟ್ಟಿದ ಶೋಕ..!
ಬೆಳಗಾವಿಯಲ್ಲಿ ಅಜಾತ ಶತ್ರು ಎಂದೇ ಕರೆಸಿಕೊಂಡಿದ್ದ ಸುರೇಶ್ ಅಂಗಡಿ ನಿಧನ ಇಡೀ ಜಿಲ್ಲೆಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಬಿಜೆಪಿ, ಕಾಂಗ್ರೆಸ್ ಪ್ರಮುಖರು, ಅವರ ಮನೆಗ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ದಿಢೀರ್ ಆಗಿ ತಮ್ಮನ್ನಗಲಿದ್ದನ್ನು ಅರಗಿಸಿಕೊಳ್ಳಲು ಆಗದೆ ಕುಟುಂಬಸ್ಥರು ತೀವ್ರ ದುಃಖತಪ್ತರಾಗಿದ್ದಾರೆ. ಅವರ ತಾಯಿ, ಪತ್ನಿ ಹಾಗೂ ಮಗಳು, ಸಂಬಂಧಿಕರೆಲ್ಲ ಕಣ್ಣೀರು ಹಾಕುತ್ತಿದ್ದಾರೆ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಇಡೀ ಕುಟುಂಬ ದುಃಖದಲ್ಲಿ ಮುಳುಗಿದೆ. ಸುರೇಶ್ ಅಂಗಡಿ ತಾಯಿ ಸೋಮವ್ವ ಅಂಗಡಿಯವರು ತೀವ್ರ ದುಃಖತಪ್ತರಾಗಿದ್ದು, ನನ್ನ ಮಗ ಬರ್ತಾನೆ, ಬಾಗಿಲು ತೆಗೀರಿ.. ಅವನಿಗೆ ಎನೂ ಆಗಿಲ್ಲ ಎಂದು ರೋದಿಸುತ್ತಿದ್ದಾರೆ. ಹಲವು ಸಂಬಂಧಿಕರು ಹಾಗೂ ಸ್ನೇಹಿತರು ಸಹ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಅವರ ಸಹೋದರಿ ಸಹ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಹ ಸುರೇಶ್ ಅಂಗಡಿ ನಿವಾಸದ ಬಳಿ ಸೇರಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುತ್ತಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm