ಬ್ರೇಕಿಂಗ್ ನ್ಯೂಸ್
27-04-22 10:56 am Bengaluru Correspondent ಕರ್ನಾಟಕ
ಬೆಂಗಳೂರು, ಎ.27: ಗೃಹ ಇಲಾಖೆಯಲ್ಲಿ ಮೇಜರ್ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರವು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಚುನಾವಣೆ ಮುಂದಿಟ್ಟುಕೊಂಡು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲು ನಿರ್ಧರಿಸಿದೆ.
ಪ್ರಮುಖವಾಗಿ ಬೆಂಗಳೂರು ನಗರ, ಮೈಸೂರು, ಮಂಗಳೂರು ನಗರ ಪೊಲೀಸ್ ಆಯುಕ್ತರ ಅವಧಿ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹೊಸ ಆಯುಕ್ತರ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗೇರಲು ಹಿರಿಯ ಐಪಿಎಸ್ ಅಧಿಕಾರಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹುದ್ದೆಯಲ್ಲಿ 20 ತಿಂಗಳು ಪೂರೈಸಿದ್ದು ಅವರಿಂದ ತೆರವಾಗುವ ಸ್ಥಾನಕ್ಕಾಗಿ ಅಧಿಕಾರಿಗಳು ಲಾಬಿ ನಡೆಸಿದ್ದಾರೆ. ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಗುಪ್ತಚರ ದಳ ಮುಖ್ಯಸ್ಥ ಬಿ.ದಯಾನಂದ್ ಹೆಸರು ಬೆಂಗಳೂರು ಆಯುಕ್ತರ ಸ್ಥಾನಕ್ಕೆ ಮುಂಚೂಣಿಯಲ್ಲಿದೆ. ಅಲ್ಲದೆ, ಆಯಕಟ್ಟಿನ ಹುದ್ದೆ ಪಡೆಯಲು ಐಪಿಎಸ್ ಅಧಿಕಾರಿಗಳು ತಮ್ಮ ಪರಿಚಿತ ರಾಜಕಾರಣಿಗಳ ಮುಖಾಂತರ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಕಮಿಷನರ್ ಆಗಿರುವ ಶಶಿಕುಮಾರ್, ಮೈಸೂರಿಗೆ ವರ್ಗಾವಣೆ ಬಯಸಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕಾಗಿ ತೆರೆಮರೆಯಲ್ಲಿ ಆಪ್ತರ ಮೂಲಕ ಲಾಬಿ ನಡೆಸಿದ್ದಾರೆ.

ಮಂಗಳೂರು ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತರು ಒಂದು ವರ್ಷ ಪೂರೈಸಿದ್ದಾರೆ. ಕನಿಷ್ಠ ಒಂದು ವರ್ಷ ಪೂರೈಸಿದ ಕಮಿಷನರ್, ಎಸ್ಪಿ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಅವಕಾಶ ಇದೆ. ಹೀಗಾಗಿ, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಅಳೆದು ತೂಗಿ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಬೆಂಗಳೂರು ನಗರ ಒಳಗೊಂಡಂತೆ ವಿವಿಧ ವಲಯಗಳ ಎಸಿಪಿ, ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಗಳ ವರ್ಗಾವಣೆಗೂ ಸರ್ಕಾರ ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ. ಪೂರ್ವ ವಲಯದಲ್ಲಿ ಐಜಿಪಿ ಹುದ್ದೆಯೂ ಖಾಲಿಯಿದ್ದು ಅದನ್ನು ತುಂಬುವುದಕ್ಕೂ ಸರಕಾರ ಮುಂದಾಗಿದೆ.
Bangalore, Mangaluru and Mysuru Police commissioner to transfer soon as major surgery is plan is all ready by the Home Ministry department.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 03:50 pm
HK News Staffer
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm