ಬ್ರೇಕಿಂಗ್ ನ್ಯೂಸ್
27-04-22 10:56 am Bengaluru Correspondent ಕರ್ನಾಟಕ
ಬೆಂಗಳೂರು, ಎ.27: ಗೃಹ ಇಲಾಖೆಯಲ್ಲಿ ಮೇಜರ್ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರವು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಚುನಾವಣೆ ಮುಂದಿಟ್ಟುಕೊಂಡು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲು ನಿರ್ಧರಿಸಿದೆ.
ಪ್ರಮುಖವಾಗಿ ಬೆಂಗಳೂರು ನಗರ, ಮೈಸೂರು, ಮಂಗಳೂರು ನಗರ ಪೊಲೀಸ್ ಆಯುಕ್ತರ ಅವಧಿ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹೊಸ ಆಯುಕ್ತರ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗೇರಲು ಹಿರಿಯ ಐಪಿಎಸ್ ಅಧಿಕಾರಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹುದ್ದೆಯಲ್ಲಿ 20 ತಿಂಗಳು ಪೂರೈಸಿದ್ದು ಅವರಿಂದ ತೆರವಾಗುವ ಸ್ಥಾನಕ್ಕಾಗಿ ಅಧಿಕಾರಿಗಳು ಲಾಬಿ ನಡೆಸಿದ್ದಾರೆ. ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಗುಪ್ತಚರ ದಳ ಮುಖ್ಯಸ್ಥ ಬಿ.ದಯಾನಂದ್ ಹೆಸರು ಬೆಂಗಳೂರು ಆಯುಕ್ತರ ಸ್ಥಾನಕ್ಕೆ ಮುಂಚೂಣಿಯಲ್ಲಿದೆ. ಅಲ್ಲದೆ, ಆಯಕಟ್ಟಿನ ಹುದ್ದೆ ಪಡೆಯಲು ಐಪಿಎಸ್ ಅಧಿಕಾರಿಗಳು ತಮ್ಮ ಪರಿಚಿತ ರಾಜಕಾರಣಿಗಳ ಮುಖಾಂತರ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಕಮಿಷನರ್ ಆಗಿರುವ ಶಶಿಕುಮಾರ್, ಮೈಸೂರಿಗೆ ವರ್ಗಾವಣೆ ಬಯಸಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕಾಗಿ ತೆರೆಮರೆಯಲ್ಲಿ ಆಪ್ತರ ಮೂಲಕ ಲಾಬಿ ನಡೆಸಿದ್ದಾರೆ.

ಮಂಗಳೂರು ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತರು ಒಂದು ವರ್ಷ ಪೂರೈಸಿದ್ದಾರೆ. ಕನಿಷ್ಠ ಒಂದು ವರ್ಷ ಪೂರೈಸಿದ ಕಮಿಷನರ್, ಎಸ್ಪಿ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಅವಕಾಶ ಇದೆ. ಹೀಗಾಗಿ, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಅಳೆದು ತೂಗಿ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಬೆಂಗಳೂರು ನಗರ ಒಳಗೊಂಡಂತೆ ವಿವಿಧ ವಲಯಗಳ ಎಸಿಪಿ, ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಗಳ ವರ್ಗಾವಣೆಗೂ ಸರ್ಕಾರ ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ. ಪೂರ್ವ ವಲಯದಲ್ಲಿ ಐಜಿಪಿ ಹುದ್ದೆಯೂ ಖಾಲಿಯಿದ್ದು ಅದನ್ನು ತುಂಬುವುದಕ್ಕೂ ಸರಕಾರ ಮುಂದಾಗಿದೆ.
Bangalore, Mangaluru and Mysuru Police commissioner to transfer soon as major surgery is plan is all ready by the Home Ministry department.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm