ಬ್ರೇಕಿಂಗ್ ನ್ಯೂಸ್
01-05-22 02:12 pm HK Desk News ಕರ್ನಾಟಕ
ಮಂಡ್ಯ, ಮೇ 1: ಮೈಸೂರು - ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಕೂದಲೆಳೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಸಾಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ರೈಲು ರಾತ್ರಿ 10.30 ಕ್ಕೆ ಮೈಸೂರಿನಿಂದ ಹೊರಟಿತ್ತು. ರಾತ್ರಿ 12 ಗಂಟೆ ವೇಳೆಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
ರೈಲಿನ ಮೂರನೇ ಬೋಗಿಯಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಯಾಣಿಕರು ಚೈನ್ ಎಳೆದು ಚಾಲಕನ ಗಮನಕ್ಕೆ ತಂದಿದ್ದಾರೆ. ರೈಲು ಸ್ಲೋ ಆಗುತ್ತಲೇ ಪ್ರಯಾಣಿಕರು ಕೆಳಕ್ಕಿಳಿದಿದ್ದಾರೆ. ಇದರಿಂದ ಅಪಾಯ ಇಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಬೋಗಿಯಿಂದ ಕೆಳಗಿಳಿಯುವಾಗ ಕೆಲವು ಪ್ರಯಾಣಿಕರಿಗಷ್ಟೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ರೈಲ್ವೇ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಸಂಚಾರ ಆರಂಭಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ರೈಲು ನಿಲುಗಡೆಯಾಗಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
Several media houses have reported that Mysuru- Dharwad train passengers had miraculous escape after fire broke out in one of the compartment. According to the reports, the train headed to Dharwad from Mysuru was stopped at Mandagere of KR Pet taluk in Mandya district, after passengers raised alarm.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm