ಬ್ರೇಕಿಂಗ್ ನ್ಯೂಸ್
04-05-22 02:23 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 4 : ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಹೆಸರು ಕೇಳಿಬಂದಿರುವ ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಅನುಮಾನವೇ ಇಲ್ಲ.. ಕರ್ನಾಟಕ ರಾಜಕಾರಣದಲ್ಲಿರುವ ಮೋಸ್ಟ್ ಕರೆಪ್ಟ್ ಮಿನಿಸ್ಟರ್ ಆತ. ಅದರಲ್ಲಿ ಅನುಮಾನ ಪಡುವ ಅಗತ್ಯವೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ.
ಸುಮ್ಮನೆ ಬಂದು ನಾನು ನೋಡೋಕೆ ಬ್ರಾಹ್ಮಣ ತರ ಇದ್ದೀನಿ, ಬಹಳ ಶುದ್ಧ ರಾಜಕಾರಣಿ ಅಂತ ಹೇಳಿಕೊಳ್ಳೋದು, ಪೋಸು ಕೊಡೋದು. ಇದೆಲ್ಲಾ ಯಾಕೆ ಬೇಕು. ಇಷ್ಟು ದಿನ ಇವರೇನು ಅಂತ ಎಲ್ಲಾ ಹೊರಗೆ ಬರ್ತಿದೆ. ಇವರ ನಡವಳಿಕೆ, ಮಾತನಾಡುವ ಶೈಲಿ ನೋಡಿದರೆ ಸಂಸ್ಕೃತಿ ಇರುವ ಯಾರು ಕೂಡ ಆ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.

ಅದೇನೋ ಎಲ್ಲವನ್ನೂ ಬಿಚ್ತೀನಿ ಅಂತ ಹೇಳಿದ್ದಾರಲ್ಲ, ಎಲ್ಲವನ್ನು ಬಿಚ್ಚಿಡಲಿ. ಯಾರು ಬೇಡ ಎಂದವರು. ತಡ ಮಾಡೋದು ಯಾಕೆ, ಬಿಚ್ಚುವುದನ್ನು ಬಿಚ್ಚಿಡಲಿ ಎಂದು ಅಶ್ವತ್ಥ ನಾರಾಯಣ ಹೆಸರೇಳದೆ ಡಿಕೆಶಿ ಟಾಂಗ್ ನೀಡಿದ್ದಾರೆ. ಇವರೆಲ್ಲ ನಮ್ಮ ಜಿಲ್ಲೆಯನ್ನು ಶುದ್ಧೀಕರಣ ಮಾಡೋಕೆ ಬಂದವರು. ಹಿಂದೆ ದೇವೇಗೌಡರು, ಆನಂತರ ಕುಮಾರಸ್ವಾಮಿ, ಆಮೇಲೆ ನಾವು ಬಂದು ಏನೂ ಮಾಡೋಕ್ಕಾಗಿಲ್ಲ. ಈಗ ಇವರು ಬಂದಿದ್ದಾರಲ್ಲಾ, ಕ್ಲೀನ್ ಮಾಡಲಿ ಬಿಡಿ. ರಾಮನಗರದ ಜನ ಗಂಡಸ್ತನ ಇಲ್ಲದವರು ಎಂದಿದ್ರು. ಇದಕ್ಕೆ ಅನಿತಕ್ಕ, ಬಿಜೆಪಿ ಮಿನಿಸ್ಟರ್ ಗಳು ಸಾಕ್ಷಿ. ನಾವೆಲ್ಲ ಯಾರೂ ಗಂಡಸರಲ್ಲ, ಟೆಸ್ಟ್ ಮಾಡ್ಕೋಬೇಕು. ಸೀರೆ ಕೊಟ್ಟರೆ ಉಟ್ಕೋತೀವಿ ಎಂದು ವ್ಯಂಗ್ಯ ಧಾಟಿಯಲ್ಲಿ ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಕಿಡಿಕಾರಿದರು.

![]()
ಸಾಕಷ್ಡು ಜನ ಮೊದಲ ರ್ಯಾಂಕ್ ಪಡೆದಿದ್ದಾರೆ. ನಮ್ಮ ಜಿಲ್ಲೆಯವರೇ ನಾಲ್ಕೈದು ಜನ ಇದ್ದಾರೆ. ಈಗ ಅವರು ಒಳಗೆ ಹೋಗಿದ್ದಾರೆ. ನಮಗೆ ಬೇಕಾದವರೇ ಅವರೆಲ್ಲ. ಸಹಾಯ ಮಾಡಿದವರಲ್ಲಿ ಮಂತ್ರಿಗಳಿರಬಹುದು ಅಥವಾ ಬೇರೆ ಯಾರಾದ್ರೂ ಆಗಿರಲು ಬಹುದು. ಅಂಗಡಿ ಓಪನ್ ಮಾಡಿದ್ರೆ ವ್ಯಾಪಾರಕ್ಕೆ ಬರ್ತಾರೆ. ಅಂಗಡಿಯೇ ಓಪನ್ ಇಲ್ಲದೆ ಇದ್ದರೆ ಖರೀದಿಗೆ ಬರ್ತಾ ಇದ್ರಾ..? ಈ ರೀತಿ ಮಾಡಬಹುದು ಅಂತ ಪ್ರಭಾವಿಗಳು ತಿಳಿಸಿರುವ ಕಾರಣ ಮನೆ ಮಠ, ಆಸ್ತಿ ಪಾಸ್ತಿ ಮಾರಿ ಕೆಲವರು ತಗ್ಲಾಕೊಂಡಿದ್ದಾರೆ. ಈಗ ಲಂಚ ಕೊಟ್ಟಚನು ನಾನು ಕೊಟ್ಟೆ ಅಂತ ಯಾರು ಹೇಳಲ್ಲ. ತೆಗೆದುಕೊಂಡವನು ಹೇಳಲ್ಲ ಎಂದು ಪಿಎಸ್ಐ ಹಗರಣದ ಬಗ್ಗೆ ಡಿಕೆಸಿ ಶಿವಕುಮಾರ್ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.
KPCC president DK Shivakumar on Monday made a serious allegation against higher education minister CN Asawath Narayan that his relative was involved in the police sub-inspector recruitment scam and accepted money from three candidates from Magadi taluk to ensure their selection.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm