ಬ್ರೇಕಿಂಗ್ ನ್ಯೂಸ್
05-05-22 07:40 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಚುರುಕಾಗುತ್ತಿದ್ದಂತೆ ಅಕ್ರಮದ ಲೇಪ ಪೊಲೀಸ್ ಇಲಾಖೆಗೂ ಮೆತ್ತಿಕೊಂಡಿದೆ. ಪ್ರಕರಣದ ಬೆನ್ನತ್ತಿರುವ ಸಿಐಡಿ ಅಧಿಕಾರಿಗಳು ಪೊಲೀಸರ ಮೇಲೆ ಚಾಟಿ ಬೀಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಡಿವೈಎಸ್ಪಿ ಸೇರಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ತಂಡ ಬಂಧಿಸಿದೆ.
ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಜೊತೆಗೆ ಹತ್ತಿರದ ಲಿಂಕ್ ಹೊಂದಿದ್ದ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಕಲಬುರಗಿ ನಗರ ಸಿಪಿಐ ಆನಂದ ಮೇತ್ರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಇಬ್ಬರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕಲಬುರಗಿ ಜಿಲ್ಲಾ ಮೂರನೇ ಜೆಎಂಎಫ್ ಕೋರ್ಟ್ ಮುಂದೆ ಇಬ್ಬರನ್ನೂ ಹಾಜರುಪಡಿಸಿದ್ದು ಎಂಟು ದಿನ ಸಿಐಡಿ ಕಸ್ಟಡಿಗೆ ಪಡೆದಿದ್ದಾರೆ.

ಆರೋಪಿಗಳ ಬಂಧನ ಒಂದೆಡೆಯಾದರೆ, ಇನ್ನೊಂದೆಡೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಉಸ್ತುವಾರಿ ಹೊಂದಿದ್ದ ಫಿಂಗರ್ ಪ್ರಿಂಟ್ ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಹಾಗೂ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಹೊಂದಿದ್ದ ಕಲಬುರಗಿ ಮಹಿಳಾ ಠಾಣೆ ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಇದೇ ವೇಳೆ ನಾಲ್ಕು ದಿನಗಳ ಹಿಂದಷ್ಟೇ ರಿಟೈರ್ ಆಗಿದ್ದ ಡಿವೈಎಸ್ಪಿ ಒಬ್ಬರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಖಚಿತ ಸಾಕ್ಷ್ಯ ಸಿಕ್ಕಲ್ಲಿ ಆ ವ್ಯಕ್ತಿಯನ್ನೂ ಬಂಧಿಸುವ ಸಾಧ್ಯತೆಯಿದೆ.
Two including DYSP suspended in PSI exam scam in Kalaburgi.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm