ಬ್ರೇಕಿಂಗ್ ನ್ಯೂಸ್
07-05-22 07:27 pm HK Desk News ಕರ್ನಾಟಕ
ವಿಜಯಪುರ, ಮೇ 7 : ಸಿಎಂ ಹುದ್ದೆ 2500 ಕೋಟಿಗೆ ಹರಾಜು ಎಂಬ ರೀತಿ ಹೇಳಿಕೆ ನೀಡಿ ಪೇಚಿಗೆ ಸಿಲುಕಿರುವ ರೆಬಲ್ ಶಾಸಕ ಬಸವನಗೌಡ ಯತ್ನಾಳ್ ವಿರುದ್ಧ ಪಕ್ಷದ ಶಿಸ್ತು ಸಮಿತಿ ಕ್ರಮಕ್ಕೆ ಶಿಫಾರಸು ಮಾಡಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಯತ್ನಾಳ್ ವ್ಯಂಗ್ಯದ ಪ್ರತಿಕ್ರಿಯೆ ನೀಡಿದ್ದಾರೆ. ಏನು ಬೇಕಾದರೂ ಶಿಫಾರಸು ಮಾಡಲಿ, ಶಿಸ್ತು ಕಮಿಟಿ ಅಂದ್ರೆ ಏನು..? ನನ್ನ ಕರಿಸ್ತಾರಲ್ಲಾ ಅಲ್ಲಿಯೇ ಹೇಳ್ತೇನೆ. ಹಿಂದೇನು ಕರೆಸಿದ್ರು ಎಂದು ಹೇಳಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರೇ ಕ್ಲಿಯರ್ ಆಗಿ ಹೇಳಿದ್ದಾರಲ್ಲ. ನಾನು ಪಾರ್ಟಿ ಬಗ್ಗೆ ಹೇಳಿಲ್ಲ, ಇನ್ ಜನರಲ್ ಆಗಿ ಮಾತಾಡಿದ್ದಾರೆ ಅಂತ. ಇಷ್ಟರ ಮೇಲೆ ಏನು ಶಿಸ್ತು ಕ್ರಮ? ಶಿಸ್ತು ಕ್ರಮ ಅಂತಾ ಕೆಲವು ಮಾಧ್ಯಮಗಳು ಹೊಡೆಯುತ್ತಿವೆ. ಅದು ಏನು ಆಗೋದಿಲ್ಲ. ಮಾಧ್ಯಮದಲ್ಲಿ ಹೇಳಿದ್ದೆಲ್ಲ ಸತ್ಯವಲ್ಲ ಎಂದರು ಯತ್ನಾಳ್. ಸತ್ಯ ಏನಿದ್ದರೂ, 24 ಕ್ಯಾರೆಟ್ ಬಂಗಾರ ಇರತ್ತೆ. ಸತ್ಯಕ್ಕೆ ಪಿಲ್ಟರ್ ಇರೋಲ್ಲ, ಸುಳ್ಳಿಗೆ ಪಿಲ್ಟರ್ ಇರುತ್ತೆ ಎಂದು ಯತ್ನಾಳ್ ಕುಹಕವಾಡಿದ್ದಾರೆ.
ಇದೇ ವೇಳೆ, ಡಿಕೆಶಿ ವಿರುದ್ಧ ಯತ್ನಾಳ್ ಸಿಡಿಮಿಡಿಯಾಗಿದ್ದು ಡಿಕೆಶಿಗೆ ನನ್ನ ಭಯ ಬಗ್ಗೆ ಶುರುವಾಗಿದೆ. ಯತ್ನಾಳ್ ಸಿಎಂ ಆದ್ರೆ ತಮ್ಮ ರಾಜಕೀಯ ಭವಿಷ್ಯ ಅಂತ್ಯವಾಗುತ್ತೆ ಎನ್ನುವ ಭಯ ಡಿಕೆಶಿಗೆ ಇದೆ. ಮತ್ತೆ ಅದೇ ಜಾಗಕ್ಕೆ (ಜೈಲಿಗೆ) ಹೋಗಬೇಕಾಗುತ್ತೆ ಅನ್ನೋ ಭಯ ಶುರುವಾಗಿದೆ. ಡಿಕೆಶಿ ಗೆ ಏನೋ ಒಂದು ಸಂದೇಶ ಸಿಕ್ಕಿದೆ. ಯತ್ನಾಳ್ ಪವರ್ಪುಲ್ ಮನುಷ್ಯ ಆದ್ರೆ ಅನ್ನೋ ಭಯ ಇದೆ. ಇದರಿಂದಾಗಿ ನನ್ನ ಬಗ್ಗೆ ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ನಾನು ಸಚಿವ ಸ್ಥಾನ ಕೇಳಿಯೇ ಇಲ್ಲ. ನಾನು ವಿಧಾನಸೌಧದಲ್ಲಿ 2 ಸಾವಿರ ಕೋಟಿ ವಿಚಾರ ಮಾತನಾಡಿದಾಗ ಇಶ್ಯೂ ಆಗಲಿಲ್ಲ. ರಾಮದುರ್ಗದಲ್ಲೂ ಹೇಳಿದ್ದೀನಿ. ವಿಧಾನ ಸೌಧದಲ್ಲಿ ಹೇಳಿದಾಗ ಯಾಕೆ ಚರ್ಚೆ ಆಗಲಿಲ್ಲ. ಕೆಲವೇ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಬದಲಾವಣೆಯ ಸುಳಿವಿದೆ, ಹೀಗಾಗಿ ನಾನು ಟಾರ್ಗೆಟ್. ಯತ್ನಾಳ್ ಏನಾದರೂ ಆದ್ರೆ ಬುಲ್ಡೋಜರ್ ತರ್ತಾರೆ ಅಂತಾ ಭಯ. ಅಕ್ರಮ ಆಸ್ತಿ ಹೊಡೆಯೋಕೆ ಶುರು ಮಾಡ್ತಾರೆ ಅಂತಾ ಭಯ. ನಾನು ಸಿಎಂ ಆದ್ರೆ ಬುಲ್ಡೊಜರ್ ರೆಡಿ ಇಟ್ಟಿದ್ದೀನಿ. ಬುಲ್ಡೊಜರ್ ಗೆ ಆರ್ಡರ್ ಕೊಟ್ಟಿದ್ದೀನಿ. ಹಾಗಾಗಿ ನನ್ನ ಸಚಿವ ಸ್ಥಾನ ತಪ್ಪಿಸಲು ಇದು ಷಡ್ಯಂತ್ರ ಎಂದಿದ್ದಾರೆ ಯತ್ನಾಳ್.
Yatnal slams DK Shivakumar says hes afraid that I will be the next CM. He's worried that I will send Bulldozer to destroy his territory.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm