ಬ್ರೇಕಿಂಗ್ ನ್ಯೂಸ್
10-05-22 10:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಇದೇ ತಿಂಗಳ ಮೇ 21 ಮತ್ತು 22 ರಂದು ಶಿಕ್ಷಕ ಹುದ್ದೆ ನೇಮಕಾತಿಗೆ ಪರೀಕ್ಷೆ ನಡೆಸಲಾಗುವುದು. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಇರಲ್ಲ. ಯಾವುದೇ ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ. ಸಮಾಜ ವಿಜ್ಞಾನ ವಿಷಯದಲ್ಲಿ 1:50 ಇದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. 1,06,083 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದ 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳಿವೆ. ಸುಮಾರು 11 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹೀಗಾಗಿ ಅಲ್ಲಿ ಕೇಂದ್ರ ಜಾಸ್ತಿ ಮಾಡಲಾಗಿದೆ ಎಂದರು.

ಪರೀಕ್ಷಾ ಕೇಂದ್ರದ ಬಗ್ಗೆ ಬಹಳಷ್ಟು ಮುಂಜಾಗ್ರತೆ ವಹಿಸಿದ್ದೇವೆ. ಉನ್ನತ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ವಸ್ತುಗಳನ್ನ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಒಂದು ಗಂಟೆ ಒಳಗೆ ಪರೀಕ್ಷಾ ಕೇಂದ್ರಗಳಿಗೆ ಬರಬೇಕು. ಅರ್ಧ ಗಂಟೆಗೆ ಮುಂಚಿತವಾಗಿ ಕೊಠಡಿಗೆ ಬರಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ, ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಒಂದು ರೂಮ್ನಲ್ಲಿ 20 ಜನರು ಮಾತ್ರ ಇರ್ತಾರೆ. ಯಾವುದೇ ಗೊಂದಲಕ್ಕೀಡಾಗದೆ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.
ಸೂಕ್ಷ್ಮ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡ್ತೀವಿ. ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಸಿಇಒ, ಎಸ್ಪಿಗಳ ನೇತೃತ್ವದಲ್ಲಿ ಕಮಿಟಿ ಮಾಡಲಾಗಿದೆ. ಪರೀಕ್ಷೆ ಜವಾಬ್ದಾರಿ ಈ ಕಮಿಟಿ ನೋಡುತ್ತದೆ. ಪರೀಕ್ಷೆಗೆ ಖಾಸಗಿ ಶಾಲಾ ಕೊಠಡಿಗಳನ್ನ ತೆಗೆದುಕೊಳ್ತೀವಿ. ಆ ಶಾಲೆಯನ್ನ ಶಿಕ್ಷಣ ಇಲಾಖೆ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತದೆ ಮತ್ತು ಅದೇ ಶಾಲೆಯ ಶಿಕ್ಷಕರನ್ನು ಪರೀಕ್ಷೆಗಳಿಗೆ ಬಳಸಿಕೊಳ್ಳುವುದಿಲ್ಲ. ಪ್ರತಿ ಕೇಂದ್ರಕ್ಕೂ ತಹಶೀಲ್ದಾರ್ ಮೇಲ್ಪಟ್ಟ ಅಧಿಕಾರಿಗಳನ್ನ ನೇಮಕ ಮಾಡಲಾಗುವುದು. ಪರೀಕ್ಷಾ ಕೇಂದ್ರದಲ್ಲಿ 144 ಸೆಕ್ಷನ್ ಇರಲಿದೆ. ಪೊಲೀಸ್ ಇಲಾಖೆ ಸಂಪೂರ್ಣ ಹದ್ದಿನ ಕಣ್ಣು ಇಟ್ಟಿದೆ ಎಂದು ವಿವರಿಸಿದರು.
The examinations, which are scheduled to be held on May 21 and May 22, will be conducted in 435 centres across different districts in the state. Following the controversial PSI (Police Sub-Inspector) recruitment scam, the competitive exams for teachers for 11,000 jobs in different districts will now be conducted under strong vigilance, Karnataka Primary and Secondary Education minister B C Nagesh said Tuesday.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm