ಬ್ರೇಕಿಂಗ್ ನ್ಯೂಸ್
10-05-22 10:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಇದೇ ತಿಂಗಳ ಮೇ 21 ಮತ್ತು 22 ರಂದು ಶಿಕ್ಷಕ ಹುದ್ದೆ ನೇಮಕಾತಿಗೆ ಪರೀಕ್ಷೆ ನಡೆಸಲಾಗುವುದು. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಇರಲ್ಲ. ಯಾವುದೇ ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ. ಸಮಾಜ ವಿಜ್ಞಾನ ವಿಷಯದಲ್ಲಿ 1:50 ಇದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. 1,06,083 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದ 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳಿವೆ. ಸುಮಾರು 11 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹೀಗಾಗಿ ಅಲ್ಲಿ ಕೇಂದ್ರ ಜಾಸ್ತಿ ಮಾಡಲಾಗಿದೆ ಎಂದರು.
ಪರೀಕ್ಷಾ ಕೇಂದ್ರದ ಬಗ್ಗೆ ಬಹಳಷ್ಟು ಮುಂಜಾಗ್ರತೆ ವಹಿಸಿದ್ದೇವೆ. ಉನ್ನತ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ವಸ್ತುಗಳನ್ನ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಒಂದು ಗಂಟೆ ಒಳಗೆ ಪರೀಕ್ಷಾ ಕೇಂದ್ರಗಳಿಗೆ ಬರಬೇಕು. ಅರ್ಧ ಗಂಟೆಗೆ ಮುಂಚಿತವಾಗಿ ಕೊಠಡಿಗೆ ಬರಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ, ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಒಂದು ರೂಮ್ನಲ್ಲಿ 20 ಜನರು ಮಾತ್ರ ಇರ್ತಾರೆ. ಯಾವುದೇ ಗೊಂದಲಕ್ಕೀಡಾಗದೆ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.
ಸೂಕ್ಷ್ಮ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡ್ತೀವಿ. ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಸಿಇಒ, ಎಸ್ಪಿಗಳ ನೇತೃತ್ವದಲ್ಲಿ ಕಮಿಟಿ ಮಾಡಲಾಗಿದೆ. ಪರೀಕ್ಷೆ ಜವಾಬ್ದಾರಿ ಈ ಕಮಿಟಿ ನೋಡುತ್ತದೆ. ಪರೀಕ್ಷೆಗೆ ಖಾಸಗಿ ಶಾಲಾ ಕೊಠಡಿಗಳನ್ನ ತೆಗೆದುಕೊಳ್ತೀವಿ. ಆ ಶಾಲೆಯನ್ನ ಶಿಕ್ಷಣ ಇಲಾಖೆ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತದೆ ಮತ್ತು ಅದೇ ಶಾಲೆಯ ಶಿಕ್ಷಕರನ್ನು ಪರೀಕ್ಷೆಗಳಿಗೆ ಬಳಸಿಕೊಳ್ಳುವುದಿಲ್ಲ. ಪ್ರತಿ ಕೇಂದ್ರಕ್ಕೂ ತಹಶೀಲ್ದಾರ್ ಮೇಲ್ಪಟ್ಟ ಅಧಿಕಾರಿಗಳನ್ನ ನೇಮಕ ಮಾಡಲಾಗುವುದು. ಪರೀಕ್ಷಾ ಕೇಂದ್ರದಲ್ಲಿ 144 ಸೆಕ್ಷನ್ ಇರಲಿದೆ. ಪೊಲೀಸ್ ಇಲಾಖೆ ಸಂಪೂರ್ಣ ಹದ್ದಿನ ಕಣ್ಣು ಇಟ್ಟಿದೆ ಎಂದು ವಿವರಿಸಿದರು.
The examinations, which are scheduled to be held on May 21 and May 22, will be conducted in 435 centres across different districts in the state. Following the controversial PSI (Police Sub-Inspector) recruitment scam, the competitive exams for teachers for 11,000 jobs in different districts will now be conducted under strong vigilance, Karnataka Primary and Secondary Education minister B C Nagesh said Tuesday.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm