ಬ್ರೇಕಿಂಗ್ ನ್ಯೂಸ್
14-05-22 12:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ಯುವತಿ ಮೇಲೆ ಆಸಿಡ್ ದಾಳಿಗೈದು ತಲೆಮರೆಸಿಕೊಂಡು ಪೊಲೀಸರ ಬಲೆಗೆ ಬಿದ್ದ ಆರೋಪಿ ನಾಗೇಶ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಸೆರೆ ಹಿಡಿದಿದ್ದಾರೆ.
ಬೆಂಗಳೂರಿನ ಕೆಂಗೇರಿಯ ಮೇಲ್ಸೇತುವೆ ಬಳಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ತಮಿಳುನಾಡು ಕಡೆಯಿಂದ ನೈಸ್ ರೋಡಲ್ಲಿ ಬೆಂಗಳೂರಿಗೆ ಬರುತ್ತಿದ್ಬದಾಗ ಮೂತ್ರ ವಿಸರ್ಜನೆಗೆ ನಿಲ್ಲಿಸಿ ಅಂತ ಕೇಳಿಕೊಂಡಿದ್ದ. ಆದರೆ ಅನುಮತಿ ಕೊಡದ ಪೊಲೀಸರು, ಬೆಂಗಳೂರು ನಗರದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಗೆ ನಿಲ್ಲಿಸಿದ್ದರು.

ಈ ವೇಳೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಹಿಡಿಯಲು ಹೋದ ಕಾನ್ಸ್ಟೇಬಲ್ ಮಹಾದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಕೂಡಲೇ ಗಾಳಿಯಲ್ಲಿ ಗುಂಡು ಹಾರಿಸಿ ಕಾಮಾಕ್ಷಿಪಾಳ್ಯ ಠಾಣೆಯ ಇನ್ಸ್ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದ್ದರು. ಆದರೆ ಇನ್ಸ್ಪೆಕ್ಟರ್ ಎಚ್ಚರಿಕೆಗೂ ಬಗ್ಗದ ನಾಗೇಶ್, ತಪ್ಪಿಸಿಕೊಂಡು ಓಡಲು ಮುಂದಾಗಿದ್ದ. ಹೀಗಾಗಿ ಆರೋಪಿ ನಾಗೇಶ್ ಬಲಗಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

15 ದಿನಗಳಿಂದ ಆರೋಪಿ ನಾಗೇಶ್, ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷ ಧರಿಸಿ ತಲೆಮರೆಸಿಕೊಂಡಿದ್ದ. ಪೊಲೀಸರು ಈ ಬಗ್ಗೆ ಮಾಹಿತಿ ಪಡೆದು ಮಾರು ವೇಷದಲ್ಲಿ ಹೋಗಿ ಗುರುವಾರ ಬಂಧಿಸಿದ್ದರು. ಅಲ್ಲಿಂದ ಕರೆತರುತ್ತಿದ್ದಾಗಲೇ ತಪ್ಪಿಸಲು ಯತ್ನಿಸಿ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾನೆ.
The youth, who had made him scarce in a well-planned manner after flinging acid on a 23-year-old woman in Bengaluru last month and seriously injured her, was finally nabbed by the Karnataka Police from Tamil Nadu's Tiruvannamalai city, where he had disguised himself as a religious seer, officials said on Friday Meanwhile, the 23-year-old acid victim has been shifted to general ward following the recovery in her health, 16 days after treatment in Intensive Care Unit (ICU).
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm