ಬ್ರೇಕಿಂಗ್ ನ್ಯೂಸ್
14-05-22 06:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು ರಾಜ್ಯಸಭೆಯ ಖಾಲಿಯಿರುವ ಎರಡು ಸದಸ್ಯ ಸ್ಥಾನಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಇದೇ ವೇಳೆ, ಮೇಲ್ಮನೆಗೆ ಬಿಎಸ್ವೈ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮಲ್ಲೇಶ್ವರಂನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ನಾಲ್ಕು ಸ್ಥಾನಗಳ ಪೈಕಿ ಒಂದಕ್ಕೆ ವಿಜಯೇಂದ್ರ ಹೆಸರು ಅಂತಿಮವಾಗಿದೆ. ಉಳಿದ ಮೂರು ಸ್ಥಾನಗಳಿಗೆ 15 ಹೆಸರು ಶಿಫಾರಸು ಮಾಡಲಾಗಿದೆ. ಈ ಹಿಂದೆ ಪರಿಷತ್ ಸದಸ್ಯರಾಗಿದ್ದ ಲಕ್ಷ್ಮಣ ಸವದಿ ಸೇರಿದಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ಸಿದ್ದರಾಜು, ರಾಜೇಂದ್ರ, ಮಹೇಶ್ ಟೆಂಗಿನಕಾಯಿ ಹೆಸರನ್ನು ಪರಿಷತ್ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.

ರಾಜ್ಯಸಭೆಯ ಎರಡು ಸ್ಥಾನದಲ್ಲಿ ಒಂದು ಸ್ಥಾನಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಅಂತಿಮಗೊಳಿಸಲಾಗಿದೆ. ಉಳಿದ ಒಂದು ಸ್ಥಾನಕ್ಕೆ ಕೆ.ಸಿ.ರಾಮಮೂರ್ತಿ ಸೇರಿ ಐವರ ಹೆಸರು ಶಿಫಾರಸು ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಪಟ್ಟಿಯಲ್ಲಿ ನಿರ್ಮಲ್ ಕುಮಾರ್ ಸುರಾನ, ಉದ್ಯಮಿ ಪ್ರಕಾಶ್ ಶೆಟ್ಟಿ, ಸಿನಿಮಾ ನಿರ್ಮಾಪಕ ಲಹರಿ ವೇಲು ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಪ್ರಕಾಶ್ ಶೆಟ್ಟಿ ಹೆಸರನ್ನು ಕಳೆದ ಬಾರಿಯೂ ರಾಜ್ಯ ಬಿಜೆಪಿ ಕೇಂದ್ರಕ್ಕೆ ಕಳಿಸಿಕೊಟ್ಟಿತ್ತು.

ವಿಧಾನ ಪರಿಷತ್ ಸದಸ್ಯತ್ವ ಪಡೆಯುವ ಮೂಲಕ ವಿಜಯೇಂದ್ರ ಸಚಿವ ಸ್ಥಾನ ಪಡೆಯಲಿದ್ದಾರೆಯೇ ಎಂಬ ನಿರೀಕ್ಷೆ ಮೂಡಿದೆ. ಸಿಎಂ ಬೊಮ್ಮಾಯಿ ಮೇ 21ರ ರಾತ್ರಿ ದಾವೋಸ್ ಪ್ರವಾಸ ತೆರಳಲಿದ್ದು, 26ರಂದು ಬೆಂಗಳೂರಿಗೆ ಮರಳಲಿದ್ದಾರೆ. ಆನಂತರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂತಾದವರು ಭಾಗವಹಿಸಿದ್ದರು.
Former chief minister B.S. BS Yeddiyurappa, son of Yeddyurappa It has been decided at the BJP Core Committee to make BY Vijayendra a member of the Legislative Council. A major Core Committee meeting was held today at the state BJP office in Malleswaram and it has been decided to send Vijayendra's name to the Central Election Committee as the BJP candidate for the council elections. The Central Committee has decided to send Nirmala Sitharaman to the Rajya Sabha again.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm