ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm