ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm