ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm