ಬ್ರೇಕಿಂಗ್ ನ್ಯೂಸ್
18-05-22 11:31 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ರಾತ್ರಿ ವರುಣ ಅಬ್ಬರಿಸಿದ್ದಾನೆ. ಸತತ ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೆಲ್ಲಾ ನೀರು ತುಂಬಿಕೊಂಡು ನದಿಗಳಾಗಿದ್ದು ವಾಹನಗಳು ತೇಲಾಡುವ ಸ್ಥಿತಿ ಉಂಟಾಗಿತ್ತು.
ಗುಡುಗು, ಸಿಡಿಲಿನೊಂದಿಗೆ ರಾತ್ರಿ 8 ರಿಂದ 10 ಗಂಟೆ ವರೆಗೂ ನಿರಂತರ ಮಳೆಯಾಗಿದ್ದು ಬೆಂಗಳೂರು ನಗರದ ಜನರು ಬೆಚ್ಚಿ ಬಿದ್ದಿದ್ದಾರೆ.
ರಸ್ತೆಗಳು ಜಲಾವೃತಗೊಂಡ ಕಾರಣ ವಾಹನ ಸವಾರರು ಪರದಾಡಿದ್ದಾರೆ. ಕಾರುಗಳು ಮಳೆ ನೀರಿನಲ್ಲಿ ಅರ್ಧಕ್ಕೆ ಮುಳುಗಡೆಯಾಗಿ ಕೆಟ್ಟು ನಿಲ್ಲುವಂತಾಗಿತ್ತು. ನಾಯಂಡಹಳ್ಳಿ, ಶೇಷಾದ್ರಿಪುರಂ, ಯಶವಂತಪುರ ಭಾಗದಲ್ಲಿ ರಸ್ತೆಗಳು ನೀರಿನಿಂದ ಆವೃತವಾಗಿತ್ತು.
ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಲ್ಲೂ ಮಳೆಯ ಆರ್ಭಟ ಮುಂದುವರೆಯಲಿದೆ.
ರಸ್ತೆಯಲ್ಲಿ ಕೆಟ್ಟು ನಿಂತ ಕಾರುಗಳು
ರಾತ್ರಿ ವೇಳೆ ದಿಢೀರ್ ಸುರಿದ ಮಳೆಗೆ ನಾಯಂಡಹಳ್ಳಿ ಜಂಕ್ಷನ್ನಲ್ಲಿ ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಭಾರೀ ಮಳೆಗೆ ರಾಜಕಾಲುವೆ ತುಂಬಿ ಹರಿದು ರಸ್ತೆಯೇ ರಾಜಕಾಲುವೆಯಾಗಿತ್ತು. ರಸ್ತೆಯಲ್ಲಿ ಸಾಗುತ್ತಿದ್ದ ಕಾರುಗಳು ಕೆಟ್ಟು ನಿಂತಿದ್ದರಿಂದ ಸಾರ್ವಜನಿಕರು ಸೇರಿ ದೂಡಿ ದಾಟಿಸುತ್ತಿದ್ದರು. ಚಾಲಕರೇ ಕಾರನ್ನು ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಯಶವಂತ ಪುರದಲ್ಲೂ ಭಾರೀ ಮಳೆಯಾದ ಪರಿಣಾಮದಿಂದಾಗಿ ಬಸ್ ನಿಲ್ದಾಣ ಬಳಿಯ ಅಂಡರ್ ಪಾಸ್ನಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಜನರು ಮಳೆಯಿಂದ ರಕ್ಷಣೆ ಪಡೆಯಲು ಫ್ಲೈ ಓವರ್ ಕೆಳಗೆ ನಿಂತಿದ್ದರು. ಯಶವಂತಪುರ, ಮತ್ತಿಕೆರೆ ಸುತ್ತ-ಮುತ್ತ ಮಳೆ ಅವಾಂತರವನ್ನೇ ಸೃಷ್ಟಿಸಿದೆ.
Heavy rains lashed Bengaluru on Tuesday evening which led to waterlogging in many parts of the city. The torrential rains, which were accompanied by lightning and thunder, started in the evening and intensified by night. It caused traffic snarls in Hebbal, Silk Board. Mysuru Road and Bommnahalli.Vehicles were stuck in the traffic for hours as some areas witnessed knee-deep water. Social media was flooded with the clips of inundated roads.
06-07-25 06:25 pm
Bangalore Correspondent
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 04:14 pm
Mangalore Correspondent
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm