ಬ್ರೇಕಿಂಗ್ ನ್ಯೂಸ್
18-05-22 11:31 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ರಾತ್ರಿ ವರುಣ ಅಬ್ಬರಿಸಿದ್ದಾನೆ. ಸತತ ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೆಲ್ಲಾ ನೀರು ತುಂಬಿಕೊಂಡು ನದಿಗಳಾಗಿದ್ದು ವಾಹನಗಳು ತೇಲಾಡುವ ಸ್ಥಿತಿ ಉಂಟಾಗಿತ್ತು.
ಗುಡುಗು, ಸಿಡಿಲಿನೊಂದಿಗೆ ರಾತ್ರಿ 8 ರಿಂದ 10 ಗಂಟೆ ವರೆಗೂ ನಿರಂತರ ಮಳೆಯಾಗಿದ್ದು ಬೆಂಗಳೂರು ನಗರದ ಜನರು ಬೆಚ್ಚಿ ಬಿದ್ದಿದ್ದಾರೆ.
ರಸ್ತೆಗಳು ಜಲಾವೃತಗೊಂಡ ಕಾರಣ ವಾಹನ ಸವಾರರು ಪರದಾಡಿದ್ದಾರೆ. ಕಾರುಗಳು ಮಳೆ ನೀರಿನಲ್ಲಿ ಅರ್ಧಕ್ಕೆ ಮುಳುಗಡೆಯಾಗಿ ಕೆಟ್ಟು ನಿಲ್ಲುವಂತಾಗಿತ್ತು. ನಾಯಂಡಹಳ್ಳಿ, ಶೇಷಾದ್ರಿಪುರಂ, ಯಶವಂತಪುರ ಭಾಗದಲ್ಲಿ ರಸ್ತೆಗಳು ನೀರಿನಿಂದ ಆವೃತವಾಗಿತ್ತು.

ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಲ್ಲೂ ಮಳೆಯ ಆರ್ಭಟ ಮುಂದುವರೆಯಲಿದೆ.

ರಸ್ತೆಯಲ್ಲಿ ಕೆಟ್ಟು ನಿಂತ ಕಾರುಗಳು

ರಾತ್ರಿ ವೇಳೆ ದಿಢೀರ್ ಸುರಿದ ಮಳೆಗೆ ನಾಯಂಡಹಳ್ಳಿ ಜಂಕ್ಷನ್ನಲ್ಲಿ ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಭಾರೀ ಮಳೆಗೆ ರಾಜಕಾಲುವೆ ತುಂಬಿ ಹರಿದು ರಸ್ತೆಯೇ ರಾಜಕಾಲುವೆಯಾಗಿತ್ತು. ರಸ್ತೆಯಲ್ಲಿ ಸಾಗುತ್ತಿದ್ದ ಕಾರುಗಳು ಕೆಟ್ಟು ನಿಂತಿದ್ದರಿಂದ ಸಾರ್ವಜನಿಕರು ಸೇರಿ ದೂಡಿ ದಾಟಿಸುತ್ತಿದ್ದರು. ಚಾಲಕರೇ ಕಾರನ್ನು ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಯಶವಂತ ಪುರದಲ್ಲೂ ಭಾರೀ ಮಳೆಯಾದ ಪರಿಣಾಮದಿಂದಾಗಿ ಬಸ್ ನಿಲ್ದಾಣ ಬಳಿಯ ಅಂಡರ್ ಪಾಸ್ನಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಜನರು ಮಳೆಯಿಂದ ರಕ್ಷಣೆ ಪಡೆಯಲು ಫ್ಲೈ ಓವರ್ ಕೆಳಗೆ ನಿಂತಿದ್ದರು. ಯಶವಂತಪುರ, ಮತ್ತಿಕೆರೆ ಸುತ್ತ-ಮುತ್ತ ಮಳೆ ಅವಾಂತರವನ್ನೇ ಸೃಷ್ಟಿಸಿದೆ.
Heavy rains lashed Bengaluru on Tuesday evening which led to waterlogging in many parts of the city. The torrential rains, which were accompanied by lightning and thunder, started in the evening and intensified by night. It caused traffic snarls in Hebbal, Silk Board. Mysuru Road and Bommnahalli.Vehicles were stuck in the traffic for hours as some areas witnessed knee-deep water. Social media was flooded with the clips of inundated roads.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm