ಬ್ರೇಕಿಂಗ್ ನ್ಯೂಸ್
19-05-22 09:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಸೃಷ್ಟಿಸುವ ಆತಂಕದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಮುಂದಿನ ವಾರ ಎನ್ಡಿಆರ್ಎಫ್ (ಕೇಂದ್ರಿಯ ವಿಪತ್ತು ರಕ್ಷಣಾ ಪಡೆ) ಪಡೆಯ ನಾಲ್ಕು ತಂಡಗಳು ರಾಜ್ಯಕ್ಕೆ ಆಗಮಿಸಲಿದೆ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ಮಾನ್ಸೂನ್ ಆಗಮನದ ಒಂದು ವಾರ ಮಂಚೆಯೇ ರಾಜ್ಯಕ್ಕೆ ಆಗಮಿಸಿ, ಕಾರ್ಯಾಚರಣೆಗೆ ಸಿದ್ಧವಾಗಿರಲಿದೆ ಎಂದು ತಿಳಿಸಿದ್ದಾರೆ.
ಎನ್ ಡಿ ಆರ್ ಎಫ್ ಎಲ್ಲೆಲ್ಲಿ ನಿಯೋಜನೆ?
ಎನ್ಡಿಆರ್ಎಫ್ ನಾಲ್ಕು ತಂಡಗಳ ಪೈಕಿ ಮೊದಲ ತಂಡ ದಕ್ಷಿಣ ಕನ್ನಡ - ಉಡುಪಿ, ಉತ್ತರ ಕನ್ನಡ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ ನಿಯೋಜನೆ ಮಾಡಲಾಗುತ್ತದೆ. ಎರಡನೇ ತಂಡ ಕೊಡಗು - ಮೈಸೂರು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ನಿಯೋಜನೆ ಮಾಡಲಾಗುತ್ತದೆ. ಮೂರನೇ ತಂಡ ಬೆಳಗಾವಿ - ಬಾಗಲಕೋಟ, ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ ನಿಯೋಜನೆ ಮಾಡಲಾಗುತ್ತದೆ. ನಾಲ್ಕನೇ ತಂಡವನ್ನು ರಾಯಚೂರು - ಯಾದಗಿರಿ, ಬಳ್ಳಾರಿ, ಕಲಬುರ್ಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಯೋಜಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲೂ ಒಂದು ತಂಡ
ಜಿಲ್ಲೆಗಳಲ್ಲಿ ಮಾತ್ರವಲ್ಲದೆ ಬೆಂಗಳೂರಿನಲ್ಲೂ ಒಂದು ಎನ್ಡಿಆರ್ ಎಫ್ ತಂಡ ಕಾರ್ಯಚರಣೆಗೆ ಸಿದ್ಧವಾಗಿರುತ್ತದೆ. ಜತೆಗೆ SDRF ತಂಡಗಳು ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಿದ್ಧವಾಗಿದೆ. ಇದೇ ಸಂದರ್ಭದಲ್ಲಿ ಮಳೆ ಹಾನಿ ಆಗದಂತೆ ಕ್ರಮ ಕೈಗೊಳ್ಳಲು ಸರ್ಕಾರವೂ ಎಲ್ಲ ಸಿದ್ಧತೆಯನ್ನು ಕೈಗೊಳ್ಳುತ್ತಿದೆ ಎಂದು ಆರ್. ಅಶೋಕ್ ತಿಳಿಸಿದರು. ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಆಯಾ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಸುವಂತೆ ವಿನಂತಿ ಮಾಡುತ್ತೇನೆ. ಇನ್ನು 3-4 ತಿಂಗಳು ಕಾರ್ಯಾಚರಣೆಯ ವೇಗ ಹೆಚ್ಚಿಸಬೇಕು. ಎಲ್ಲೇ ಭೂಕುಸಿತ, ನೆರೆ ಬಂದರೂ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಹಾರವನ್ನು ತ್ವರಿತವಾಗಿ ನೀಡಬೇಕು.
ಮನೆಹಾನಿ, ಪ್ರಾಣಹಾನಿ ಉಂಟಾದಾಗ 48 ಗಂಟೆಯಲ್ಲಿ ಪರಿಹಾರ ನೀಡಬೇಕು. ಕಂಟ್ರೋಲ್ ರೂಮ್ ಸದಾ ಆಕ್ಟಿವ್ ಆಗಿರಬೇಕು. ಕಾಳಜಿ ಕೇಂದ್ರದಲ್ಲಿ ಇಲಾಖೆ ಸೂಚಿಸಿದ ಪ್ರಕಾರವೇ ಊಟೋಪಚಾರ ವ್ಯವಸ್ಥೆ ಮಾಡಬೇಕು. ಈಗಿನಿಂದಲೇ ಎಲ್ಲ ರೀತಿಯ ರೂಪುರೇಷೆ ಸಿದ್ಧಪಡಿಸಬೇಕು. ಎಲ್ಲೆಲ್ಲಿ ಭೂಕುಸಿತ ಆಗುವ ಸಾಧ್ಯತೆ ಇದೆಯೋ ಅಲ್ಲಿನ ಜನರ ಮನವೊಲಿಸಿ ಖುದ್ದು ಡಿಸಿಗಳೇ ಸ್ಥಳಾಂತರ ಮಾಡಿಸಬೇಕು. ಪ್ರಾಣಹಾನಿ ಆಗದಂತೆ ತಡೆಯುವುದು ನಮ್ಮ ಮೊದಲ ಆದ್ಯತೆ ಆಗಬೇಕಿದೆ ಎಂದರು.
Four teams of NDRF (Central Disaster Protection Force) will arrive in the state next week as a precautionary measure in the wake of fears of monsoon rains in the state. The Minister of Revenue. Ashok informed him that the arrival of the state would be ready for operation just a week before the arrival of the monsoon.The first of four NDRF teams will be deployed in Dakshina Kannada – Udupi, Uttar Kannada and surrounding areas. The second team will be deployed in Kodagu – Mysore, Hassan and Chikmagalur.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm