ಬ್ರೇಕಿಂಗ್ ನ್ಯೂಸ್
21-05-22 04:38 pm HK News Desk ಕರ್ನಾಟಕ
ಮೈಸೂರು, ಮೇ 21 : ಈ ಬಾರಿ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದಾರೆ ಎನ್ನುವ ಮಾಹಿತಿಯಿದ್ದು ಜಿಲ್ಲಾಡಳಿತ ಸಿದ್ಧತೆಯಲ್ಲಿ ತೊಡಗಿದೆ.
ಪ್ರಧಾನಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಬಾರಿ ಮೈಸೂರು ಅಥವಾ ಕಾಶ್ಮೀರದ ಲಡಾಕ್ ನಲ್ಲಿ ನಡೆಯುವುದು ಬಹುತೇಕ ಫೈನಲ್ ಆಗಿತ್ತು. ಮೈಸೂರು ಯೋಗ ಹಬ್ ಆಗಿರುವುದರಿಂದ ಮೋದಿ ಅವರು ಅಂತಿಮವಾಗಿ ಮೈಸೂರಿಗೆ ಬರುವುದನ್ನು ಖಚಿತಪಡಿಸಿದ್ದಾರೆ.
ಈ ಬಾರಿ ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿಗೆ ಕರೆಸಲು ಸಂಸದ ಪ್ರತಾಪಸಿಂಹ ಖುದ್ದು ದೆಹಲಿಗೆ ತೆರಳಿದ್ದರು. ಕೇಂದ್ರದ ಆಯುಷ್ ತಂಡವೂ ಏ.29ರಂದು ಮೈಸೂರಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿ ಹೋಗಿತ್ತು. ಭದ್ರತಾ ಅಧಿಕಾರಿಗಳಿಂದಲೂ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಮೋದಿ ಮೈಸೂರಿಗೆ ಬರುವುದನ್ನು ಖಚಿತ ಪಡಿಸಿದ್ದಾರೆ ಎನ್ನಲಾಗುತ್ತಿದೆ.
2015ರಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವಾಗಿ ವಿಶ್ವಸಂಸ್ಥೆ ಘೋಷಣೆ ಮಾಡಿದ ಬಳಿಕ ಆಯುಷ್ ಸಚಿವಾಲಯವು ದೇಶಾದ್ಯಂತ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಪ್ರಧಾನಿ ಮೋದಿ ಅವರು ಪ್ರತಿವರ್ಷ ಒಂದೊಂದು ರಾಜ್ಯದ ನಗರಕ್ಕೆ ತೆರಳಿ ಯೋಗಾಸನಗಳನ್ನು ಮಾಡುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಕೆಲಸ ಮಾಡುತ್ತಿದ್ದಾರೆ. 2015ರಲ್ಲಿ ದೆಹಲಿಯ ರಾಜಪಥದಲ್ಲಿ ಮೋದಿ ಯೋಗ ಸಂದೇಶ ಸಾರಿದ್ದರು. 2016ರಲ್ಲಿ ಚಂಡೀಗಢ, 2017ರಲ್ಲಿ ಲಕ್ನೋ, 2018ರಲ್ಲಿ ಉತ್ತರಾಖಂಡದ ಡೆಹ್ರಾಡೂನ್, 2019ರಲ್ಲಿ ಜಾರ್ಖಂಡಿನ ರಾಂಚಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆದಿತ್ತು. ನರೇಂದ್ರ ಮೋದಿ ಸ್ವತಃ ಯೋಗಾಸನಗಳನ್ನು ಮಾಡಿ ಯೋಗದ ಮಹತ್ವ ಪ್ರಚುರಪಡಿಸಿದ್ದರು. ಕಳೆದ ಎರಡು ವರ್ಷದಲ್ಲಿ ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಯೋಗ ದಿನಾಚರಣೆ ನಡೆದಿರಲಿಲ್ಲ.
ಮೈಸೂರಿನಲ್ಲಿ ಯೋಗ ಫೆಡರೇಶನ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಂಡಿವೆ. ಅರಮನೆ ಎದುರು ಅಥವಾ ರೇಸ್ಕೋರ್ಸ್ನಲ್ಲಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಆದರೆ, ಒಂದೂವರೆ ಲಕ್ಷ ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ.
Prime Minister Narendra Modi will be part of the International Yoga Day celebrations in Mysuru on June 21.Union Ayush Department told Karnataka Chief Secretary P Ravi Kumar that all necessary arrangements be made for PM's visit. The Ministry of Ayush is the nodal Ministry for observation of the International Day of Yoga every year.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 04:14 pm
Mangalore Correspondent
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm