ಬ್ರೇಕಿಂಗ್ ನ್ಯೂಸ್
21-05-22 04:38 pm HK News Desk ಕರ್ನಾಟಕ
ಮೈಸೂರು, ಮೇ 21 : ಈ ಬಾರಿ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದಾರೆ ಎನ್ನುವ ಮಾಹಿತಿಯಿದ್ದು ಜಿಲ್ಲಾಡಳಿತ ಸಿದ್ಧತೆಯಲ್ಲಿ ತೊಡಗಿದೆ.
ಪ್ರಧಾನಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಬಾರಿ ಮೈಸೂರು ಅಥವಾ ಕಾಶ್ಮೀರದ ಲಡಾಕ್ ನಲ್ಲಿ ನಡೆಯುವುದು ಬಹುತೇಕ ಫೈನಲ್ ಆಗಿತ್ತು. ಮೈಸೂರು ಯೋಗ ಹಬ್ ಆಗಿರುವುದರಿಂದ ಮೋದಿ ಅವರು ಅಂತಿಮವಾಗಿ ಮೈಸೂರಿಗೆ ಬರುವುದನ್ನು ಖಚಿತಪಡಿಸಿದ್ದಾರೆ.
ಈ ಬಾರಿ ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿಗೆ ಕರೆಸಲು ಸಂಸದ ಪ್ರತಾಪಸಿಂಹ ಖುದ್ದು ದೆಹಲಿಗೆ ತೆರಳಿದ್ದರು. ಕೇಂದ್ರದ ಆಯುಷ್ ತಂಡವೂ ಏ.29ರಂದು ಮೈಸೂರಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿ ಹೋಗಿತ್ತು. ಭದ್ರತಾ ಅಧಿಕಾರಿಗಳಿಂದಲೂ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಮೋದಿ ಮೈಸೂರಿಗೆ ಬರುವುದನ್ನು ಖಚಿತ ಪಡಿಸಿದ್ದಾರೆ ಎನ್ನಲಾಗುತ್ತಿದೆ.
![]()
2015ರಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವಾಗಿ ವಿಶ್ವಸಂಸ್ಥೆ ಘೋಷಣೆ ಮಾಡಿದ ಬಳಿಕ ಆಯುಷ್ ಸಚಿವಾಲಯವು ದೇಶಾದ್ಯಂತ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಪ್ರಧಾನಿ ಮೋದಿ ಅವರು ಪ್ರತಿವರ್ಷ ಒಂದೊಂದು ರಾಜ್ಯದ ನಗರಕ್ಕೆ ತೆರಳಿ ಯೋಗಾಸನಗಳನ್ನು ಮಾಡುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಕೆಲಸ ಮಾಡುತ್ತಿದ್ದಾರೆ. 2015ರಲ್ಲಿ ದೆಹಲಿಯ ರಾಜಪಥದಲ್ಲಿ ಮೋದಿ ಯೋಗ ಸಂದೇಶ ಸಾರಿದ್ದರು. 2016ರಲ್ಲಿ ಚಂಡೀಗಢ, 2017ರಲ್ಲಿ ಲಕ್ನೋ, 2018ರಲ್ಲಿ ಉತ್ತರಾಖಂಡದ ಡೆಹ್ರಾಡೂನ್, 2019ರಲ್ಲಿ ಜಾರ್ಖಂಡಿನ ರಾಂಚಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆದಿತ್ತು. ನರೇಂದ್ರ ಮೋದಿ ಸ್ವತಃ ಯೋಗಾಸನಗಳನ್ನು ಮಾಡಿ ಯೋಗದ ಮಹತ್ವ ಪ್ರಚುರಪಡಿಸಿದ್ದರು. ಕಳೆದ ಎರಡು ವರ್ಷದಲ್ಲಿ ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಯೋಗ ದಿನಾಚರಣೆ ನಡೆದಿರಲಿಲ್ಲ.

ಮೈಸೂರಿನಲ್ಲಿ ಯೋಗ ಫೆಡರೇಶನ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಂಡಿವೆ. ಅರಮನೆ ಎದುರು ಅಥವಾ ರೇಸ್ಕೋರ್ಸ್ನಲ್ಲಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಆದರೆ, ಒಂದೂವರೆ ಲಕ್ಷ ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ.
Prime Minister Narendra Modi will be part of the International Yoga Day celebrations in Mysuru on June 21.Union Ayush Department told Karnataka Chief Secretary P Ravi Kumar that all necessary arrangements be made for PM's visit. The Ministry of Ayush is the nodal Ministry for observation of the International Day of Yoga every year.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm