ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm