ಬ್ರೇಕಿಂಗ್ ನ್ಯೂಸ್
24-05-22 10:14 pm HK News Desk ದೇಶ - ವಿದೇಶ
ಹೈದರಾಬಾದ್, ಮೇ 24: ದಲಿತ ಸಂಘಟನೆಗಳ ಒತ್ತಾಯಕ್ಕೆ ಮಣಿದು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರಕಾರ ಕೋಣಸೀಮಾ ಜಿಲ್ಲೆಗೆ ಬಿ.ಆರ್.ಅಂಬೇಡ್ಕರ್ ಕೋಣಸೀಮಾ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದ್ದನ್ನು ವಿರೋಧಿಸಿ ಜಿಲ್ಲಾ ಕೇಂದ್ರ ಅಮಲಾಪುರ ನಗರದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಈ ವೇಳೆ, ಉದ್ರಿಕ್ತ ಪ್ರತಿಭಟನಾಕಾರರು ಸಾರಿಗೆ ಸಚಿವ ಪಿನ್ಪೈ ವಿಶ್ವರೂಪ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಸಚಿವರಿಗೆ ಸೇರಿದ ಮೂರು ಕಾರುಗಳಿಗೂ ಬೆಂಕಿ ಹಾಕಿದ್ದಾರೆ.
ಪ್ರತಿಭಟನಾಕಾರರು ಹಿಂದೆ ಇರುವಂತೆಯೇ ಜಿಲ್ಲೆಯ ಹೆಸರನ್ನು ಉಳಿಸಬೇಕೆಂದು ಒತ್ತಾಯಿಸಿ ಮೆರವಣಿಗೆ ನಡೆಸಿದ್ದಾರೆ. ಪೊಲೀಸರು 144 ಸೆಕ್ಷನ್ ವಿಧಿಸಿದ್ದರೂ, ಅದನ್ನು ಉಲ್ಲಂಘಿಸಿ ಧರಣಿ ನಡೆಸಿದ್ದಾರೆ. ಈ ವೇಳೆ, ಪೊಲೀಸರ ಮೇಲೆ ಕಲ್ಲು ತೂರಾಟವೂ ನಡೆದಿದ್ದು, ಹಲವು ಕಡೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ನಗರದಲ್ಲಿರುವ ಸಾರಿಗೆ ಸಚಿವರ ಮನೆ, ವಾಹನಗಳಿಗೆ ಬೆಂಕಿ ಹಾಕಿದ್ದಾರೆ.
ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ್ದಾರೆ. ಈ ವೇಳೆ, ಪೊಲೀಸರ ಮೇಲೆ ಕಲ್ಲು ತೂರಿದ್ದು ಡಿಎಸ್ಪಿ ಮಾಧವ ರೆಡ್ಡಿ ಮತ್ತು ಎಸ್ಪಿ ಗನ್ ಮೇನ್ ಗಾಯಗೊಂಡಿದ್ದಾರೆ. ಗೃಹ ಸಚಿವ ತಾನೇತಿ ವನಿತಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಈ ರೀತಿಯ ಹಿಂಸೆಯನ್ನು ಖಂಡಿಸುತ್ತೇನೆ. ಜಿಲ್ಲೆಗೆ ಮರು ನಾಮಕರಣ ಮಾಡುವ ಬಗ್ಗೆ ಎಲ್ಲ ಪಕ್ಷಗಳ ಸಹಮತ ಇದೆ. ಜನತೆ ಶಾಂತಿ ಕಾಪಾಡಬೇಕು. ಘಟನೆಯಲ್ಲಿ 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ ಎಂದಿದ್ದಾರೆ.
ಸಾರಿಗೆ ಸಚಿವ ಪಿನ್ಪೈ ವಿಶ್ವರೂಪಂ ಅಮಲಾಪುರಂ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಅವರ ಕ್ಷೇತ್ರದಲ್ಲಿಯೇ ಜನರು ಬೀದಿಗೆ ಇಳಿದಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಕೋಣಸೀಮಾ ಜಿಲ್ಲೆಯ ಹೆಸರನ್ನು ಭೀಮರಾವ್ ರಾಮ್ ಜಿ ಅಂಬೇಡ್ಕರ್ ಕೋಣಸೀಮಾ ಎಂಬುದಾಗಿ ನಾಮಕರಣ ಮಾಡಲು ನಿರ್ಧಾರ ತೆಗೆದುಕೊಂಡಿದ್ದರು. ಅಮಲಾಪುರಂ ಈ ಜಿಲ್ಲೆಯ ಕೇಂದ್ರ ಸ್ಥಾನವಾಗಿದ್ದು, ಅದೇ ಪ್ರದೇಶದಲ್ಲಿ ಈಗ ಹಿಂಸೆ ಭುಗಿಲೆದ್ದಿದೆ.
The home of state Transport Minister Pinipe Viswarup was set ablaze by locals as tensions prevailed in Andhra Pradesh's Amalapuram town where hundreds protested against the state's decision to rename a district after BR Ambedkar. The minister's family were rescued from the house by the police.A rally was planned to the district Collector’s office in Amalapuram on May 24, Tuesday. The protesters, despite police curbs, demonstrated against the state government’s proposal to rename the district as BR Ambedkar Konaseema district.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm