ಬ್ರೇಕಿಂಗ್ ನ್ಯೂಸ್
29-05-22 01:41 pm HK News Desk ದೇಶ - ವಿದೇಶ
ಮಂಡ್ಲಾ ,ಮೇ 29: ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ಉತ್ಸವವೊಂದರ ವೇಳೆ ಪಾನಿಪುರಿ ಸೇವಿಸಿದ ಬಳಿಕ 97 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾನುವಾರ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಪೂರಿತ ಆಹಾರ ಸೇವಿಸಿದ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲ ಮಕ್ಕಳೂ ಶನಿವಾರ ಸಂಜೆ ಒಂದೇ ಅಂಗಡಿಯಿಂದ ರುಚಿ ರುಚಿಯಾದ ಪಾನಿಪುರಿಯನ್ನು ತಿಂದು ಸಂಭ್ರಮಿಸಿದ್ದರು. ಮಂಡ್ಲಾ ಜಿಲ್ಲಾ ಕೇಂದ್ರದಿಂದ 38 ಕಿಮೀ ದೂರದಲ್ಲಿರುವ ಬುಡಕಟ್ಟು ಪ್ರಾಬಲ್ಯದ ಸಿಂಗರ್ಪುರ ಪ್ರದೇಶದಲ್ಲಿ ಉತ್ಸವ ಆಯೋಜನೆ ಮಾಡಲಾಗಿತ್ತು. ಅಕ್ಕಪಕ್ಕದ ಅನೇಕ ಹಳ್ಳಿಗಳ ಜನರು ವ್ಯಾಪಾರ ವಹಿವಾಟಿಗಾಗಿ ಅಲ್ಲಿಗೆ ಬಂದಿದ್ದರು.

ಸಂಜೆ 7.30ರ ಸುಮಾರಿಗೆ ಮಕ್ಕಳಲ್ಲಿ ಹೊಟ್ಟೆ ನೋವು ಮತ್ತು ವಾಂತಿ ಸಮಸ್ಯೆ ಕಂಡುಬಂದಿತ್ತು ಎಂದು ಜಿಲ್ಲಾ ಆಸ್ಪತ್ರೆ ಸಿವಿಲ್ ಸರ್ಜನ್ ಡಾ. ಕೆಆರ್ ಶಾಕ್ಯ ತಿಳಿಸಿದ್ದಾರೆ. "ವಿಷಪೂರಿತ ಆಹಾರ ಸೇವನೆಯಿಂದ ಬಳಲುತ್ತಿದ್ದ 97 ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರೀಗ ಅಪಾಯದಿಂದ ಪಾರಾಗಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ಪಾನಿಪುರಿ ಮಾರಾಟಗಾರನನ್ನು ಬಂಧಿಸಲಾಗಿದೆ. ತಿನಿಸಿನ ಮಾದರಿಗಳನ್ನು ಸಂಗ್ರಹಿಸಿರುವ ಪೊಲೀಸರು, ಅವುಗಳನ್ನು ಪರೀಕ್ಷೆಗೆ ರವಾನಿಸಿದ್ದಾರೆ. ಮಂಡ್ಲಾ ಸಂಸದರಾಗಿರುವ ಕೇಂದ್ರ ಸಚಿವ ಫಗ್ಗಾನ್ ಸಿಂಗ್ ಕುಲಸ್ತೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳನ್ನು ಶನಿವಾರ ರಾತ್ರಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
Ninety seven children suffered from food poisoning after eating 'pani puri' at a fair in Madhya Pradesh's Mandla district, a health official said on Sunday. All the victims consumed the spicy snack from the same shop on Saturday evening at the fair organised in the tribal-dominated Singarpur area, 38 km from the district headquarters, where people from various nearby villages had come to make purchases, he said.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm