ಬ್ರೇಕಿಂಗ್ ನ್ಯೂಸ್
03-06-22 10:08 am HK News Desk ದೇಶ - ವಿದೇಶ
ನಾಗಪುರ, ಜೂ 03: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಕಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಾಶಿ ಜ್ಞಾನವಾಪಿ ಸೇರಿದಂತೆ ದೇಶದ ವಿವಿಧ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
ಆರ್ಎಸ್ಎಸ್ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಪೂರ್ವದಲ್ಲಿ ಅವರು ಹಿಂದೂಗಳೇ ಆಗಿದ್ದರು ಎಂದು ಹೇಳಿದರು.
ಜ್ಞಾನವಾಪಿ ಮಸೀದಿ ವಿಚಾರವನ್ನು ಪ್ರಸ್ತಾಪಿಸಿ, ಹಿಂದೂ ಹಾಗೂ ಮುಸ್ಲಿಮರು ಮಾತುಕತೆ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದರೆ ಇದು ಎಲ್ಲ ಸಮಯದಲ್ಲೂ ಸಾಧ್ಯವಾಗಲಾರದು. ಹೀಗಾಗಿ ಕೋರ್ಚ್ನಲ್ಲಾದರೂ ತೀರ್ಪು ಬಂದಾಗ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು.
ಇತಿಹಾಸವನ್ನು ನಾವು ರಚನೆ ಮಾಡಿಲ್ಲ. ಇಂದಿನ ಹಿಂದೂ-ಮುಸ್ಲಿಮರೂ ರಚಿಸಿಲ್ಲ. ಭಾರತದ ಮೇಲೆ ಇಸ್ಲಾಂ ರಾಜರು ದಂಡಯಾತ್ರೆ ಕೈಗೊಂಡಾಗ ಜ್ಞಾನವಾಪಿಯಂತಹ ಘಟನೆಗಳು ನಡೆದಿವೆ. ನೂರಾರು ದೇವಸ್ಥಾನಗಳು ನಾಶವಾಗಿವೆ. ಹೀಗಾಗಿ ದಿನಕ್ಕೊಂದು ಹೊಸ ವಿವಾದವನ್ನು ಯಾಕೆ ಸೃಷ್ಟಿ ಮಾಡಬೇಕು? ಎಲ್ಲ ಮಸೀದಿಗಳಲ್ಲೂ ಯಾಕೆ ಶಿವಲಿಂಗವನ್ನು ಹುಡುಕಬೇಕು ಎಂದು ಪ್ರಶ್ನಿಸಿದರು.
ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರ್ಎಸ್ಎಸ್ ಪಾಲ್ಗೊಂಡಿತ್ತು ನಿಜ. ಕೆಲ ಐತಿಹಾಸಿಕ ಕಾರಣ ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ನಾವು ಭಾಗಿಯಾಗಿದ್ದು ನಿಜ. ಆದರೆ ಇನ್ನು ಮುಂದೆ ಈ ರೀತಿಯ ಹೋರಾಟದಲ್ಲಿ ಭಾಗಿಯಾಗುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆವು. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.
RSS chief Mohan Bhagwat on Thursday called for a "path through mutual agreement" on the controversy over the filming of Gyanvapi mosque in Uttar Pradesh's Varanasi. Hindu and Muslim petitioners are fighting a legal battle over a court-ordered filming of the mosque complex to check whether there are idols of Hindu Gods and Goddesses, and whether a "Shivling" has been found, as claimed by the Hindu petitioners.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm