ಬ್ರೇಕಿಂಗ್ ನ್ಯೂಸ್
03-06-22 10:08 am HK News Desk ದೇಶ - ವಿದೇಶ
ನಾಗಪುರ, ಜೂ 03: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಕಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಾಶಿ ಜ್ಞಾನವಾಪಿ ಸೇರಿದಂತೆ ದೇಶದ ವಿವಿಧ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
ಆರ್ಎಸ್ಎಸ್ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಪೂರ್ವದಲ್ಲಿ ಅವರು ಹಿಂದೂಗಳೇ ಆಗಿದ್ದರು ಎಂದು ಹೇಳಿದರು.

ಜ್ಞಾನವಾಪಿ ಮಸೀದಿ ವಿಚಾರವನ್ನು ಪ್ರಸ್ತಾಪಿಸಿ, ಹಿಂದೂ ಹಾಗೂ ಮುಸ್ಲಿಮರು ಮಾತುಕತೆ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದರೆ ಇದು ಎಲ್ಲ ಸಮಯದಲ್ಲೂ ಸಾಧ್ಯವಾಗಲಾರದು. ಹೀಗಾಗಿ ಕೋರ್ಚ್ನಲ್ಲಾದರೂ ತೀರ್ಪು ಬಂದಾಗ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು.
ಇತಿಹಾಸವನ್ನು ನಾವು ರಚನೆ ಮಾಡಿಲ್ಲ. ಇಂದಿನ ಹಿಂದೂ-ಮುಸ್ಲಿಮರೂ ರಚಿಸಿಲ್ಲ. ಭಾರತದ ಮೇಲೆ ಇಸ್ಲಾಂ ರಾಜರು ದಂಡಯಾತ್ರೆ ಕೈಗೊಂಡಾಗ ಜ್ಞಾನವಾಪಿಯಂತಹ ಘಟನೆಗಳು ನಡೆದಿವೆ. ನೂರಾರು ದೇವಸ್ಥಾನಗಳು ನಾಶವಾಗಿವೆ. ಹೀಗಾಗಿ ದಿನಕ್ಕೊಂದು ಹೊಸ ವಿವಾದವನ್ನು ಯಾಕೆ ಸೃಷ್ಟಿ ಮಾಡಬೇಕು? ಎಲ್ಲ ಮಸೀದಿಗಳಲ್ಲೂ ಯಾಕೆ ಶಿವಲಿಂಗವನ್ನು ಹುಡುಕಬೇಕು ಎಂದು ಪ್ರಶ್ನಿಸಿದರು.
ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರ್ಎಸ್ಎಸ್ ಪಾಲ್ಗೊಂಡಿತ್ತು ನಿಜ. ಕೆಲ ಐತಿಹಾಸಿಕ ಕಾರಣ ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ನಾವು ಭಾಗಿಯಾಗಿದ್ದು ನಿಜ. ಆದರೆ ಇನ್ನು ಮುಂದೆ ಈ ರೀತಿಯ ಹೋರಾಟದಲ್ಲಿ ಭಾಗಿಯಾಗುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆವು. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.
RSS chief Mohan Bhagwat on Thursday called for a "path through mutual agreement" on the controversy over the filming of Gyanvapi mosque in Uttar Pradesh's Varanasi. Hindu and Muslim petitioners are fighting a legal battle over a court-ordered filming of the mosque complex to check whether there are idols of Hindu Gods and Goddesses, and whether a "Shivling" has been found, as claimed by the Hindu petitioners.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm