ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm