ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm