ಬ್ರೇಕಿಂಗ್ ನ್ಯೂಸ್
03-06-22 09:40 pm HK News Desk ದೇಶ - ವಿದೇಶ
ಕಾನ್ಪುರ, ಜೂನ್ 3: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಇತ್ತೀಚೆಗೆ ಟಿವಿ ಚರ್ಚೆ ಒಂದರಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಮಹಮ್ಮದ್ ಪೈಗಂಬರ್ ಬಗ್ಗೆ ಆಡಿರುವ ಮಾತುಗಳನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳು ಕಾನ್ಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದವು. ಅದರಂತೆ ಇಂದು ಹರತಾಳ ನಡೆದಿದ್ದು ನಗರದ ಪರೇಡ್ ಚೌಕ್ ನಲ್ಲಿ ಎಲ್ಲ ಅಂಗಡಿಗಳನ್ನು ಮುಚ್ಚಿಸಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ, ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಸೇರಿ ಪರಸ್ಪರ ಕಲ್ಲು ತೂರಾಟ ನಡೆಸಿವೆ. ಶುಕ್ರವಾರ ಮಧ್ಯಾಹ್ನ ಮಸೀದಿಗೆ ಬಂದಿದ್ದ ಮುಸ್ಲಿಮರ ಒಂದು ಗುಂಪು ಅಲ್ಲಿಂದಲೇ ಬೀದಿಗೆ ಇಳಿದಿತ್ತು. ಪರೇಡ್ ಚೌಕ್ ಮಾರುಕಟ್ಟೆ ಬಳಿ ಜನರು ಸೇರುತ್ತಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ, ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರದ ಪುಣೆ ಮತ್ತು ದಕ್ಷಿಣ ಮುಂಬೈನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ವಿಚಾರದ ಬಗೆ ಟಿವಿ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನೂಪುರ್ ಶರ್ಮಾ, ಇಸ್ಲಾಂ ಬಗ್ಗೆ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ಆಧರಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಟೀಕಿಸಿದ್ದರು. ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ ಅನ್ನುವ ವಾದಕ್ಕೆ ಪ್ರತಿಯಾಗಿ ಹೇಳಿಕೆ ಕೊಟ್ಟಿದ್ದ ನೂಪುರ್ ಶರ್ಮಾ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು. ಜಾಲತಾಣದಲ್ಲಿ ಶರ್ಮಾ ಬಗ್ಗೆ ಅವಹೇಳನ ಮಾಡಿದ್ದಲ್ಲದೆ, ಮನೆಗೆ ನುಗ್ಗಿ ರೇಪ್ ಮಾಡುತ್ತೇವೆ. ಮನೆಯವರನ್ನು ಕೊಲ್ಲುತ್ತೇವೆ ಎಂದು ಆಕೆಗೆ ಬೆದರಿಕೆ ಹಾಕಲಾಗಿದೆ. ಈ ರೀತಿ ಬೆದರಿಕೆ ಒಡ್ಡಿದವರ ಸ್ಕ್ರೀನ್ ಶಾಟ್ ತೆಗೆದು ನೂಪುರ್ ಶರ್ಮಾ ದೆಹಲಿ ಪೊಲೀಸರಿಗೆ ಟ್ವೀಟ್ ಮಾಡಿದ್ದಾರೆ.
Hundreds clashed in Kanpur after a Muslim organization called to shut down shops at the Parade Market - one of the biggest wholesale markets in the city - over the alleged comments made by BJP leader Nupur Sharma about Prophet Mohammed in a televised debate.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm