ಬ್ರೇಕಿಂಗ್ ನ್ಯೂಸ್
08-06-22 03:03 pm HK News Desk ದೇಶ - ವಿದೇಶ
ನವದೆಹಲಿ, ಜೂ 8: ಬುಧವಾರ ದೆಹಲಿಯ ಜಾಮಿಯಾ ನಗರದ ಎಲೆಕ್ಟ್ರಿಕ್ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಕಾರುಗಳು ಸೇರಿ 90ಕ್ಕೂ ಹೆಚ್ಚು ವಾಹಗಳು ಸುಟ್ಟು ಭಸ್ಮವಾಗಿವೆ.
11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಕಾರು, ಇ-ರಿಕ್ಷಾಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಜಾಮಿಯಾ ನಗರದದಲ್ಲಿರುವ ಪಾರ್ಕಿಂಗ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮುಂಜಾನೆ ದೂರವಾಣಿ ಕರೆ ಬಂದಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
ಘಟನೆಯಲ್ಲಿ ಒಟ್ಟು 10 ಕಾರುಗಳು, ಒಂದು ಮೋಟಾರ್ ಸೈಕಲ್, ಎರಡು ಸ್ಕೂಟಿ, 30 ಹೊಸ ಇ-ರಿಕ್ಷಾಗಳು ಮತ್ತು 50 ಹಳೆಯ ಇ-ರಿಕ್ಷಾಗಳು ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಇ-ರಿಕ್ಷಾದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಈ ಘಟನೆ ನಡೆಯುವ ಕೆಲವು ಗಂಟೆಗಳ ಹಿಂದೆ ಮತ್ತೊಂದು ಬೆಂಕಿ ಅವಘಡ ನಡೆದಿದೆ. ದೆಹಲಿಯ ಉತ್ತರ ಬ್ಲಾಕ್ನಲ್ಲಿರುವ ಗೃಹ ವ್ಯವಹಾರಗಳ ಸಚಿವಾಲಯದ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಕರೆ ಬಂದಿತ್ತು, ಉತ್ತರ ಬ್ಲಾಕ್ನಲ್ಲಿರುವ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದರು.
ತಕ್ಷಣ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿವೆ. ಇದುವರೆಗೂ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.
ಶಾಖದ ಅಲೆಗಳ ಹೊಡೆತಕ್ಕೆ ಸಿಲುಕಿರುವ ರಾಷ್ಟ್ರ ರಾಜಧಾನಿಯಲ್ಲಿ ಬೆಂಕಿ ಅವಘಡಗಳು ನಡೆಯುತ್ತಲೇ ಇದೆ. ಇತ್ತೀಚೆಗಷ್ಟೆ ದೆಹಲಿಯ ಮುಂಡ್ಕಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದರು.
ದುರಂತದಲ್ಲಿ ಕೆಲವರ ದೇಹಗಳು ಸುಟ್ಟು ಕರಕಲಾಗಿದ್ದವು, ಡಿಎನ್ಎ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹಗಳನ್ನು ಪತ್ತೆಹಚ್ಚಿ, ಕುಟುಂಬಸ್ಥರಿಗೆ ನೀಡಲಾಗಿತ್ತು.
Over 90 vehicles, including 10 cars, were gutted in a massive fire that broke out in a metro parking lot in the national capital on Wednesday morning, an official said. No casualties or injuries were reported in the incident. The official informed that they received a call about the fire incident around 5.00 a.m. at the Main Tikona Park, Jamia Nagar in South-East Delhi after which as many as 11 fire tenders were immediately pressed into service. The cause of the fire is yet to be ascertained.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm