ಬ್ರೇಕಿಂಗ್ ನ್ಯೂಸ್
11-06-22 04:05 pm HK News Desk ದೇಶ - ವಿದೇಶ
ರಾಂಚಿ, ಜೂನ್ 11: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಮುಸ್ಲಿಮ್ ಮತೀಯರ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಉದ್ರಿಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಹಲವಾರು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಸತ್ತಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಹಲವಾರು ಪೊಲೀಸರು ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಗ್ಗಿನಿಂದಲೇ ರಾಂಚಿಯಲ್ಲಿ ಪ್ರತಿಭಟನೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿತ್ತು. ರಸ್ತೆಗಳಲ್ಲಿ ಟೈರ್ ಗೆ ಬೆಂಕಿ ಹಚ್ಚುವುದು, ನಿಲ್ಲಿಸಿರುವ ವಾಹನಗಳಿಗೆ ಬೆಂಕಿ ಹಚ್ಚುವ ಕೆಲಸ ನಡೆದಿದೆ. ಸಣ್ಣ ಮಕ್ಕಳು, ಹರೆಯದ ಹುಡುಗರನ್ನು ಪ್ರಚೋದಿಸಿ ಗಲಭೆಗೆ ಹಚ್ಚುವ ಕೆಲಸ ನಡೆದಿದೆ. ರಾಂಚಿಯ ಕೆಲವು ಏರಿಯಾಗಳಲ್ಲಿ ಪೊಲೀಸರ ಕೈಮೀರಿದ್ದು, ಕರ್ಫ್ಯೂ ಹೇರಲಾಗಿದೆ. ಜನರು ಮನೆಯಿಂದ ಹೊರಬರದಂತೆ ತಡೆಯುತ್ತಿದ್ದಾರೆ. ಸಿಆರ್ ಪಿಎಫ್ ಯೋಧರನ್ನು ಗಲಭೆ ಪೀಡಿತ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.

ರಾಂಚಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಹೇರಲಾಗಿದ್ದು, ಕೆಲವು ಕಡೆಗಳಲ್ಲಿ ಅಂಗಡಿ, ವ್ಯಾಪಾರಸ್ಥರು ಕೂಡ ಹೊರಗೆ ಬರುವಂತಿಲ್ಲ. ಅಂಗಡಿ ಓಪನ್ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಅಲ್ಲದೆ, ಸೋಶಿಯಲ್ ಮೀಡಿಯಾದ ಮೂಲಕ ಗಲಭೆಗೆ ಪ್ರೇರಣೆ ನೀಡುವ ಕೆಲಸ ಆಗುತ್ತಿರುವ ಶಂಕೆಯಲ್ಲಿ ರಾಂಚಿಯಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ. ಕೇವಲ ಫೋನ್ ಸಂಪರ್ಕ ಮಾತ್ರ ಸೌಲಭ್ಯ ನೀಡಲಾಗಿದೆ.

ಬಿಹಾರದ ಸಚಿವ ಬಿಜೆಪಿ ಮುಖಂಡ ನಿತಿನ್ ನವೀನ್ ಶುಕ್ರವಾರ ರಾಂಚಿಯಲ್ಲಿದ್ದು ರಸ್ತೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ಬರುತ್ತಿದ್ದಾಗಲೇ ಪ್ರತಿಭಟನೆ ಎದುರಾಗಿದೆ. ಉದ್ರಿಕ್ತರು ಸಚಿವರ ವಾಹನಕ್ಕೆ ಕಲ್ಲುತೂರಿ ಹಾನಿಗೊಳಿಸಲು ಮುಂದಾಗಿದ್ದಾರೆ. ಈ ವೇಳೆ, ಸಚಿವ ನಿತಿನ್ ನವೀನ್ ಹಲ್ಲೆಕೋರರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಹಲ್ಲೆ, ಹಿಂಸಾಚಾರ ಘಟನೆ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ರಾಂಚಿಯಲ್ಲಿ ಹರತಾಳಕ್ಕೆ ಕರೆ ನೀಡಿದ್ದು, ಶನಿವಾರ ನಗರ ಪೂರ್ತಿ ಬಂದ್ ಆಗಿದೆ.
An uneasy calm prevailed in Jharkhand’s Ranchi on Saturday, less than 24 hours after a protest against suspended BJP spokesperson Nupur Sharma’s inflammatory remarks on Prophet Mohammad turned violent. Streets were deserted as prohibitory orders remained in force in parts of the cityprohibitory orders remained in force in parts of the city, and internet services were suspended. Announcements were being made through the public address system in all localities, warning citizens not to venture out, otherwise they would be taken into custody.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm