ಬ್ರೇಕಿಂಗ್ ನ್ಯೂಸ್
29-09-20 05:20 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 29: ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಬೆನ್ನಲ್ಲೇ ಈಗ ಚೀನಾದಿಂದ ಮತ್ತೊಂದು ರೀತಿಯ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿರುವುದು ದೃಢಪಟ್ಟಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಕ್ಯಾಟ್ ಕ್ಯೂ ವೈರಸ್ (CQV - Cat Que Virus) ಎಂದು ಹೆಸರಿಸಲಾಗಿರುವ ಈ ವೈರಸ್ ಚೀನಾ ಮತ್ತು ವಿಯೆಟ್ನಾಂ ದೇಶಗಳ ಹಲವರಲ್ಲಿ ಸೋಂಕಿಗೆ ಕಾರಣವಾಗಿದೆ. ಇದೇ ವೇಳೆ, ಭಾರತದಲ್ಲೂ ಈ ವೈರಸ್ ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದಲ್ಲಿ ಎರಡು ಸಿಕ್ಯೂವಿ ಸೋಂಕು ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಆ ಎರಡೂ ಪ್ರಕರಣ ಕರ್ನಾಟಕದಲ್ಲೇ ಇರುವುದು ಆತಂಕ ಮೂಡಿಸಿದೆ. ಚೀನಾ ಮತ್ತು ವಿಯೆಟ್ನಾನಲ್ಲಿ ಸೊಳ್ಳೆ ಮತ್ತು ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಭಾರತದಲ್ಲೂ ಕೆಲವು ಜಾತಿಯ ಸೊಳ್ಳೆಗಳು ಈ ವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತವೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೆಯೇ, ಹಂದಿಗಳಿಗೂ ಸೋಂಕು ಬೇಗ ಹರಡಲಿದೆ. ಹಂದಿ ಮತ್ತು ಸೊಳ್ಳೆಗಳ ಮೂಲಕ ಮನುಷ್ಯನಿಗೆ ರೋಗ ಹರಡುತ್ತದೆ ಎನ್ನುತ್ತಾರೆ ಐಸಿಎಂಆರ್ ವಿಜ್ಞಾನಿಗಳು.

ಕ್ಯಾಟ್ ಕ್ಯೂ ವೈರಸ್ ಸೋಂಕು ತಗುಲಿದವರಿಗೆ ಉಸಿರಾಟದ ತೊಂದರೆ, ಎದೆ ನೋವು, ನುಂಗಲು ತೊಂದರೆ, ಮಿದುಳು ಪೊರೆಯಲ್ಲಿ ಊತ, ಮಕ್ಕಳ ಮಿದುಳಿನಲ್ಲಿ ಊತ ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚೀನಾದಲ್ಲಿ ಹೊಸ ಸೋಂಕು ಬೆಳಕಿಗೆ ಬಂದ ನಂತರ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯ ವಿಜ್ಞಾನಿಗಳು ದೇಶಾದ್ಯಂತ 883 ವ್ಯಕ್ತಿಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಯಾರಲ್ಲೂ ವೈರಸ್ ಸಿಕ್ಕಿಲ್ಲವಾದರೂ ಇಬ್ಬರಲ್ಲಿ ಈ ವೈರಾಣುವಿನ ಪ್ರತಿಕಾಯಗಳ(Anti-bodies) ಉಪಸ್ಥಿತಿ ಕಂಡುಬಂದಿದೆ. ಅಂದರೆ ಈ ಇಬ್ಬರಲ್ಲಿ ಸೋಂಕು ಬಂದು ಹೋಗಿದ್ದರ ಕುರುಹು ಇದು ಎನ್ನಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm